ರಾಜ್ಯ

ಸದನದಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷದ ಹೋರಾಟದ ಫಲದಿಂದ ಮೋದಿ ಅವರು ದೇಶದ ಪ್ರಧಾನಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನ ಅಂಗೀಕಾರದ 75 ವರ್ಷಗಳ ಸ್ಮರಣಾರ್ಥ ಲೋಕಸಭೆಯಲ್ಲಿ ನಡೆದ ಎರಡು ದಿನಗಳ ಚರ್ಚೆಯಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕಾಂಗ್ರೆಸ್‌ ಪಕ್ಷದ ಹೋರಾಟದ ಫಲದಿಂದ ಮೋದಿ ಅವರು ದೇಶದ ಪ್ರಧಾನಿಯಾಗಿದ್ದಾರೆ. ಇದನ್ನು ಮೊದಲು ತಿಳಿದುಕೊಳ್ಳಬೇಕು ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಪಕ್ಷವು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದೆ. ಸಂವಿಧಾನ, ತ್ರಿವರ್ಣ ಧ್ವಜ, ರಾಷ್ಟ್ರಗೀತೆ ಹಾಗೂ ಪ್ರಜಾಪ್ರಭುತ್ವವನ್ನು ನೀಡಿದ್ದರಿಂದ ಪ್ರಧಾನಿಯಾಗಿ ಸಂಸತ್‌ನಲ್ಲಿ ನೀವು ಭಾಷಣ ಮಾಡಲು ಸಾಧ್ಯವಾಗಿದೆ ಎಂದರು.

ಇನ್ನು ಕೋವಿಡ್‌ ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವಧಿಯಲ್ಲಿ ಕೋವಿಡ್‌ ಹಗರಣ ನಡೆದಿದೆ ಎಂಬ ಆರೋಪದ ಮೇಲೆ ಎಫ್‌ಐಆರ್‌ ಆಗಿದೆ. ಯಾರೇ ತಪ್ಪು ಮಾಡಿದ್ದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರಿಗೆ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡುವ ಬಗ್ಗೆ ಆಸಕ್ತಿ ಇಲ್ಲ. ಬಿಜೆಪಿಗೆ ರಾಜಕೀಯ ಬಿಟ್ಟು ಬೇರೆನೂ ಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಕಾಪಿ ಮಾಡು ಎಂದು ಹೇಳಿದ ಗುರುಗಳ ಮಾತನ್ನು ಧಿಕ್ಕರಿಸಿದೆ, ಆದರೆ ಅವರನ್ನು ದ್ವೇಷಿಸಲಿಲ್ಲ

ನಮ್ಮ ತಂದೆ ಪೋರ್‌ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…

2 hours ago

ರಾಷ್ಟ್ರಪಿತನ ‘ಸತ್ಯಾನ್ವೇಷಣೆ’ಗೆ ನೂರು ವರುಷ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…

2 hours ago

ಡಿಜಿಟಲ್ ವೇದಿಕೆಗಳಲ್ಲಿ ಅಶ್ಲೀಲತೆಯ ಆರ್ಭಟ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…

2 hours ago

ಮೆದಗನಾಣೆ ಗ್ರಾಮಕ್ಕೆ ಕೊನೆಗೂ ವಿದ್ಯುತ್ ಸಂಪರ್ಕ

೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ…

2 hours ago

ಚಾರಣಕ್ಕೆ ನೇಚರ್ ಗೈಡ್ ಕಡ್ಡಾಯ

ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್‌ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್‌ ಖಂಡ್ರೆ  ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ…

2 hours ago