ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ನವೆಂಬರ್ ಬಳಿಕ ಸಿಎಂ ಬದಲಾಗುತ್ತಾರೆಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಾತ್ಮಕವಾಗಿ ತೀರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಜ್ಯೋತಿಷ್ಯದ ಬಗ್ಗೆ ತಿಳಿದಿದೆ. ಆದರೆ ಅಶೋಕ್ ಅವರು ಯಾವಾಗ ಜ್ಯೋತಿಷ್ಯ ಬೋರ್ಡ್ ಹಾಕಿಕೊಂಡರೋ ಗೊತ್ತಿಲ್ಲ. ಹೀಗಾಗಿ ನಾನು ಶೀಘ್ರವೇ ವಿಪಕ್ಷ ನಾಯಕರ ಬಳಿ ಜ್ಯೋತಿಷ್ಯ ಕೇಳುತ್ತೇನೆ ಎಂದು ಟೀಕಿಸಿದರು.
ಇದೇ ಸಂದರ್ಭದಲ್ಲಿ ನಾಲ್ಕೈದು ಜೆಡಿಎಸ್ ಶಾಸಕರು ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದಾರೆಂಬ ಹೇಳಿಕೆಯ ಬಗ್ಗೆ ಮಾತನಾಡಿದ ಅವರು, ಇದೆಲ್ಲವೂ ಸುಳ್ಳು ಸುದ್ದಿಯಾಗಿದೆ. ನಾನು ಯಾವ ಜೆಡಿಎಸ್ ಶಾಸಕರನ್ನು ಸಂಪರ್ಕಿಸಿಲ್ಲ, ಅವರೊಂದಿಗೆ ಯಾವುದೇ ರೀತಿಯ ವಿಚಾರಗಳನ್ನು ಚರ್ಚಿಸಿಲ್ಲ. ಆದರೆ ಸ್ಥಳೀಯ ಮಟ್ಟದ ಕಾರ್ಯಕರ್ತರಿಗೆ ನೋವಿದೆ ಎಂದು ಗೊತ್ತು ಅಷ್ಟೇ. ಅವರು ಇನ್ನೂ ಎಷ್ಟೂ ದಿನ ಎಂದು ಕಾಯುತ್ತಾರೆ. ಜೆಡಿಎಸ್ ಕಾರ್ಯಕರ್ತರಿಗೆ ರಾಷ್ಟ್ರೀಯ ಪಕ್ಷಕ್ಕೆ ಸೇರಿಕೊಳ್ಳುವ ಆಸೆ ಇದೆ. ಹೀಗಾಗಿ ನಾನು ಪಕ್ಷಕ್ಕೆ ಬನ್ನಿ ಸೇರಿಸಿಕೊಳ್ಳುತ್ತೇವೆ ಎಂದಿದ್ದೇನೆ ಎಂದು ಹೇಳಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…