by vijayendra
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ ಹೈಡ್ರಾಮಾ ಹಾಗೂ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿರುವುದು ಖಂಡನೀಯ. ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಪಾಳೆಗಾರಿಕೆ ಸಂಸ್ಕೃತಿಯನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಅಧಿಕಾರ ಶಾಶ್ವತ ಎನ್ನುವ ಭಾವನೆಯಲ್ಲಿ ಡಿಕೆಶಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನು ಓದಿ: ಡಿಸಿಎಂ ಡಿಕೆಶಿ ಬೆಂಗಳೂರು ನಡಿಗೆಯಲ್ಲಿ ಹೈಡ್ರಾಮಾ: ಶಾಸಕ ಮುನಿರತ್ನ ಪ್ರತಿಭಟನೆ
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರೂ ಕೂಡ ಎರಡೂವರೆ ವರ್ಷದಿಂದ ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು ಇವರಿಂದ ಸಾಧ್ಯವಾಗಿಲ್ಲ. ಈಗ ಗ್ರೇಟರ್ ಬೆಂಗಳೂರು ಅಥಾರಿಟಿ ಎಂಬ ಹೊಸ ಡ್ರಾಮಾ ಶುರು ಮಾಡಿದ್ದಾರೆ. ಇದರಿಂದ ಯಾರಿಗೆ ಏನು ಪ್ರಯೋಜನ? ಈಗ ಶಾಸಕರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಓರ್ವ ಜನಪ್ರತಿನಿಧಿಗೆ ಗೌರವ ಕೊಡದಿರುವುದು ಸರಿಯಲ್ಲ. ಬರುವ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರಗಳನ್ನು ನೀಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…