by vijayendra
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ ಹೈಡ್ರಾಮಾ ಹಾಗೂ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿರುವುದು ಖಂಡನೀಯ. ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಪಾಳೆಗಾರಿಕೆ ಸಂಸ್ಕೃತಿಯನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಅಧಿಕಾರ ಶಾಶ್ವತ ಎನ್ನುವ ಭಾವನೆಯಲ್ಲಿ ಡಿಕೆಶಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನು ಓದಿ: ಡಿಸಿಎಂ ಡಿಕೆಶಿ ಬೆಂಗಳೂರು ನಡಿಗೆಯಲ್ಲಿ ಹೈಡ್ರಾಮಾ: ಶಾಸಕ ಮುನಿರತ್ನ ಪ್ರತಿಭಟನೆ
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರೂ ಕೂಡ ಎರಡೂವರೆ ವರ್ಷದಿಂದ ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು ಇವರಿಂದ ಸಾಧ್ಯವಾಗಿಲ್ಲ. ಈಗ ಗ್ರೇಟರ್ ಬೆಂಗಳೂರು ಅಥಾರಿಟಿ ಎಂಬ ಹೊಸ ಡ್ರಾಮಾ ಶುರು ಮಾಡಿದ್ದಾರೆ. ಇದರಿಂದ ಯಾರಿಗೆ ಏನು ಪ್ರಯೋಜನ? ಈಗ ಶಾಸಕರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಓರ್ವ ಜನಪ್ರತಿನಿಧಿಗೆ ಗೌರವ ಕೊಡದಿರುವುದು ಸರಿಯಲ್ಲ. ಬರುವ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರಗಳನ್ನು ನೀಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…