ಚಿಕ್ಕಮಗಳೂರು/ಶೃಂಗೇರಿ: ಕೇಂದ್ರ ಸರ್ಕಾರದಿಂದ ದೇಶದ 28 ರಾಜ್ಯಗಳಿಗೂ ತೆರಿಗೆ ಹಂಚಿಕೆ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ ತೆರಿಗೆ ನೀಡುವಲ್ಲಿ ಅನ್ಯಾಯ ಮಾಡಿದೆ. ಹಾಗಾಗಿ ನಮ್ಮ ಹಕ್ಕಿಗೆ ಮತ್ತು ನಮ್ಮ ತೆರಿಗೆಗೆ ಹೋರಾಟ ಮಾಡಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಶೃಂಗೇರಿಯಲ್ಲಿ ಇಂದು(ಜನವರಿ.11) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದಿಂದ ನಿನ್ನೆ(ಜ.10) ಪ್ರತಿಯೊಂದು ರಾಜ್ಯಗಳಿಗೂ ತೆರಿಗೆ ಹಣವನ್ನು ಹಂಚಿಕೆ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ 6310.40 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ ನಾನು ಉತ್ತರ ಪ್ರದೇಶದ ಬಗ್ಗೆ ಮಾತನಾಡುವುದಿಲ್ಲ, ಏಕೆಂದರೆ ಅದು ದೊಡ್ಡ ರಾಜ್ಯ. ಆದರೆ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಸರಿಯಾದ ಅನುಪಾತದಲ್ಲಿ ತೆರಿಗೆ ಪಾಲು ಹಂಚಿಕೆಯಾಗದೇ ಅನ್ಯಾಯವಾಗಿದೆ. ಹೀಗಿದ್ದರೂ ರಾಜ್ಯದ ಸಂಸದರೂ ಈ ಬಗ್ಗೆ ಪ್ರಶ್ನಿಸಿದೇ ಮೌನವಹಿಸಿರುವರು ಎಂದು ವಾಗ್ದಾಳಿ ನಡೆಸಿದ್ದಾರೆ.
ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಅಲ್ಲದೇ ಮುಖ್ಯಮಂತ್ರಿಗಳು ಸಹ ದೊಡ್ಡ ಅಧ್ಯಯನ ನಡೆಸುತ್ತಿದ್ದಾರೆ. ಹೀಗಾಗಿ ನಮ್ಮ ಹಕ್ಕಿಗಾಗಿ ನಮ್ಮ ತೆರಿಗೆ ಹೋರಾಟ ನಡೆಸಬೇಕು ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…