ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಎಂ.ಬಿ.ಪಾಟೀಲ್ ಅವರು ನಾಳೆ ನಡೆಯುವ ಹೂಡಿಕೆದಾರರ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ, ಸ್ಥಳವನ್ನು ಪರಿಶೀಲಿಸಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಹೂಡಿಕೆದಾರರ ಸಮಾವೇಶ ನಾಳೆ(ಫೆ.11) ನಡೆಯಲಿದೆ. ಈ ವಿಚಾರವಾಗಿ ಅರಮನೆ ಮೈದಾನಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಮತ್ತು ಎಂ.ಬಿ.ಪಾಟೀಲ್ ಅವರು ಪ್ರದರ್ಶನ ತಾಣಗಳು, ಗೋಷ್ಠಿಗಳು ನಡೆಯಲಿರುವ ಸ್ಥಳಗಳು ಚರ್ಚೆ ಮತ್ತು ಒಡಂಬಡಿಕೆ ನಡೆಯಲಿರುವ ಸಭಾಂಗಣಗಳು, ಕಂಟ್ರಿ ಪೆವಿಲಿಯನ್ ಹಾಗೂ ಫುಡ್ ಕೋರ್ಟ್ ಸೇರಿದಂತೆ ಇನ್ನಿತರ ಸ್ಥಳಗಳನ್ನು ಖುದ್ದಾಗಿ ವೀಕ್ಷಿಸಿ ಅಂತಿಮ ಕ್ಷಣಗಳ ಕೆಲ ಸುಧಾರಣೆಗಳತ್ತ ಗಮನ ಹರಿಸಿ ಎಂದು ಸಲಹೆಗಳನ್ನು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು ನಾಳೆ ಸಂಜೆ 4 ಗಂಟೆಗೆ ಸಮಾವೇಶವೂ ಉದ್ಘಾಟನೆಗೊಳ್ಳಲಿದೆ. ಇನ್ನು ಈ ಸಮಾವೇಶವೂ ರಾಜ್ಯದ ಐಟಿ, ಬಿಟಿ ಹಾಗೂ ಕೈಗಾರಿಕಾ ವಲಯಕ್ಕೆ ಮತ್ತಷ್ಟು ಪುಷ್ಟಿ ತುಂಬಲಿದೆ ಎಂದು ಹೇಳಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…