ಚನ್ನಪಟ್ಟಣ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಮಾತು ಮಾತಿಗೂ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷ ಟಾಂಗ್ ಕೊಡುತ್ತಿದ್ದು, ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಇಬ್ಬರ ನಡುವಿನ ಜಟಾಪಟಿ ಮುಂದುವರಿದಿದೆ.
ಇತ್ತೀಚೆಗೆ ನಡೆದ ಸರ್ಕಾರಿ ಅಧಿಕಾರಿಗಳ ಸಭೆಯೊಂದರಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಅಧಿಕಾರಿಗಳನ್ನ ಗುಲಾಮರು ಎಂದು ಜರೆದಿದ್ದರು. ಇದಕ್ಕೆ ಚನ್ನಪಟ್ಟಣದಲ್ಲಿ ಬೇವೂರಿನಲ್ಲಿ ಇಂದು(ಜೂ.26) ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳ ಬಳಿ ಕ್ಷಮೆ ಕೇಳಿದ್ದಾರೆ.
ಹಿಂದಿನ ಶಾಸಕರು ಅಧಿಕಾರಿಗಳನ್ನು ಗುಲಾಮರು ಅಂದಿದ್ದನ್ನು ಮಾಧ್ಯಮದಲ್ಲಿ ನೋಡಿದೆ. ಗುಲಾಮರು ಅನ್ನೋದು ಎಲ್ಲಾದರೂ ಉಂಟಾ? ಅಧಿಕಾರಿಗಳು ಯಾರಿಗೂ ಗುಲಾಮರಾಗುವುದು ಬೇಡ. ಅಧಿಕಾರಿಗಳು ಜನರ ಸೇವೆ ಮಾಡಬೇಕು ಅಂತ ಈ ಹುದ್ದೆಗೆ ಬಂದಿರುತ್ತಾರೆ. ಸರ್ಕಾರದ ಕೆಲಸ ದೇವರ ಕೆಲಸ ಎಂದು ವಿಧಾನಸೌದದಲ್ಲಿ ಬರೆದಿದೆ. ಅಧಿಕಾರಿಗಳು ಯಾರಿಗೂ ಗುಲಾಮರಾಗೋದು ಬೇಡ ಎಂದರು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…