ಚನ್ನಪಟ್ಟಣ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಮಾತು ಮಾತಿಗೂ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷ ಟಾಂಗ್ ಕೊಡುತ್ತಿದ್ದು, ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಇಬ್ಬರ ನಡುವಿನ ಜಟಾಪಟಿ ಮುಂದುವರಿದಿದೆ.
ಇತ್ತೀಚೆಗೆ ನಡೆದ ಸರ್ಕಾರಿ ಅಧಿಕಾರಿಗಳ ಸಭೆಯೊಂದರಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಅಧಿಕಾರಿಗಳನ್ನ ಗುಲಾಮರು ಎಂದು ಜರೆದಿದ್ದರು. ಇದಕ್ಕೆ ಚನ್ನಪಟ್ಟಣದಲ್ಲಿ ಬೇವೂರಿನಲ್ಲಿ ಇಂದು(ಜೂ.26) ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳ ಬಳಿ ಕ್ಷಮೆ ಕೇಳಿದ್ದಾರೆ.
ಹಿಂದಿನ ಶಾಸಕರು ಅಧಿಕಾರಿಗಳನ್ನು ಗುಲಾಮರು ಅಂದಿದ್ದನ್ನು ಮಾಧ್ಯಮದಲ್ಲಿ ನೋಡಿದೆ. ಗುಲಾಮರು ಅನ್ನೋದು ಎಲ್ಲಾದರೂ ಉಂಟಾ? ಅಧಿಕಾರಿಗಳು ಯಾರಿಗೂ ಗುಲಾಮರಾಗುವುದು ಬೇಡ. ಅಧಿಕಾರಿಗಳು ಜನರ ಸೇವೆ ಮಾಡಬೇಕು ಅಂತ ಈ ಹುದ್ದೆಗೆ ಬಂದಿರುತ್ತಾರೆ. ಸರ್ಕಾರದ ಕೆಲಸ ದೇವರ ಕೆಲಸ ಎಂದು ವಿಧಾನಸೌದದಲ್ಲಿ ಬರೆದಿದೆ. ಅಧಿಕಾರಿಗಳು ಯಾರಿಗೂ ಗುಲಾಮರಾಗೋದು ಬೇಡ ಎಂದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…