ರಾಜ್ಯ

ಫ್ಯೂಚರ್‌ ಆಫ್‌ ಇನ್ನೋವೇಶನ್‌ ಎಕ್ಸ್-ಪೋಗೆ ಚಾಲನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್‌ ಆಫ್‌  ಇನ್ನೋವೇಶನ್‌ ಎಕ್ಸ್‌-ಪೋಗೆ ಚಾಲನೆ ನೀಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆಯಿಂದ ಇನ್‌ವೆಸ್ಟ್‌ ಕರ್ನಾಟಕ ಕಾರ್ಯಕ್ರಮ ನಡೆಯುತ್ತಿದ್ದು, ಇಂದು(ಫೆಬ್ರವರಿ.12) ಈ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ ಚಾಲನೆ ನೀಡಿ ಮಾತನಾಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಯುವಜನತೆಯ ಗಮನ ಸೆಳೆಯುತ್ತಿರುವುದೆನೆಂದರೆ ನಾಳಿನ ನಮ್ಮ ಜಗತ್ತಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ನಾವೀನ್ಯತೆ ಆಗಿದೆ. ಹೀಗಾಗಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಇಂದು ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು.

ಇದೇ ವೇಳೆ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವ ಎಂ.ಬಿ.ಪಾಟೀಲ್‌ ಅವರು, ಕರ್ನಾಟಕ ಪೆವಿಲಿಯನ್, ಟೊಯೋಟಾ, ಎಂಬೆಸಿ ಗ್ರೂಪ್, ರಾಜ್ಯ ಪ್ರವಾಸೋದ್ಯಮ, ಡ್ರೋನ್ ತಂತ್ರಜ್ಞಾನದ ವೈಶಿಷ್ಟ್ಯಪೂರ್ಣ ಮಜಲುಗಳನ್ನು ಕುತೂಹಲದಿಂದ ವೀಕ್ಷಿಸಿ, ಅವುಗಳ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೇ ಕೃಷಿಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಹೊತ್ತು ತರಲಿವೆ. ಜೊತೆಗೆ ಅಗ್ರಿ-ಟೆಕ್‌ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ರೋಗಪತ್ತೆ ಹಾಗೂ ಚಿಕಿತ್ಸೆಗಳನ್ನು ಸುಲಭವಾಗಿಸುವ ಆರೋಗ್ಯ ಸೇವೆಗಳ ತಂತ್ರಜ್ಞಾನಗಳ ಬಗ್ಗೆಯೂ ತಿಳಿದುಕೊಂಡಿದ್ದಾರೆ.

ಈ ಪ್ರದರ್ಶನದ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಮಾತನಾಡಿ, ಇಂದಿನ ಸಮಾವೇಶದಲ್ಲಿ 40ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಿವೆ. ಈ ಪೈಕಿ ಜಾಗತಿಕ ಮಟ್ಟದ ಕಂಪನಿಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ನವೋದ್ಯಮಗಳೆರಡೂ ಇವೆ. ಇದರೊಂದಿಗೆ ಡ್ರೋನ್, ಬಾಹ್ಯಾಕಾಶ, ಕೃಷಿ, ಆರೋಗ್ಯ, ಉತ್ಪಾದನಾ ವಲಯ, ವೈಮಾಂತರಿಕ್ಷ, ರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನ ಧಾರೆಗಳನ್ನು ಇಲ್ಲಿ ನೋಡಬಹುದು ಎಂದು ತಿಳಿಸಿದರು.

ಇನ್ನೂ ಪ್ರಮುಖವಾಗಿ ಈ ಸಮಾವೇಶದಲ್ಲಿ ಮರುಬಳಕೆ ಇಂಧನ, ಸೆಮಿಕಂಡಕ್ಟರ್, ವಿದ್ಯುಚ್ಚಾಲಿತ ವಾಹನಗಳು ಹಾಗೂ ಸುಸ್ಥಿರ ಉತ್ಪಾದನೆಗೆ ಹೆಸರಾದ ಕಂಪನಿಗಳು ಭಾಗವಹಿಸಿವೆ. ರಾಜ್ಯದ ಸಾಧನೆಗಳನ್ನು ಬಿಂಬಿಸುವ ಪ್ರತ್ಯೇಕ ಕರ್ನಾಟಕ ಪೆವಿಲಿಯನ್‌ ಸಹ ಇದೆ. ಇಂದು ಪಾಲ್ಗೊಂಡಿರುವ ಕಂಪೆನಿಗಳಲ್ಲಿ ಜಿ.ಇ. ಹೆಲ್ತ್‌ಕೇರ್‌, ಹಿರೋ ಫ್ಯೂಚರ್‌ ಇಂಜಿನಿಯರ್ಸ್‌, ರಿವರ್‌ ಮೊಬಿಲಿಟಿ, ಸರಳಾ ಏವಿಯೇಷನ್‌, ಗೆಲಾಕ್ಸಿ ಸ್ಪೇಸ್‌ ಹಾಗೂ ಲ್ಯಾಮ್ ರೀಸರ್ಚ್ ಮುಖ್ಯವಾಗಿದೆ. ಅಲ್ಲದೇ ಕರ್ನಾಟಕ ಪೆವಿಲಿಯನ್‌ನಲ್ಲಿ ಕ್ವಿನ್‌ ಸಿಟಿ, ಫ್ಲೈಯಿಂಗ್‌ ವೆಡ್ಜ್‌, ಬೆಲ್ಲಾಟ್ರಿಕ್ಸ್‌, ಸ್ಕೀಸರ್ವ್‌ ಮತ್ತು ಫ್ಲಕ್ಸ್‌ ಆಟೋ ಸೇರಿದಂತೆ ಮುಂತಾದ ಉದ್ಯಮಗಳಿವೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

1 hour ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

2 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

2 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

2 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

3 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

3 hours ago