ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ ಚಾಲನೆ ನೀಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆಯಿಂದ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ ನಡೆಯುತ್ತಿದ್ದು, ಇಂದು(ಫೆಬ್ರವರಿ.12) ಈ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ ಚಾಲನೆ ನೀಡಿ ಮಾತನಾಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಯುವಜನತೆಯ ಗಮನ ಸೆಳೆಯುತ್ತಿರುವುದೆನೆಂದರೆ ನಾಳಿನ ನಮ್ಮ ಜಗತ್ತಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ನಾವೀನ್ಯತೆ ಆಗಿದೆ. ಹೀಗಾಗಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಇಂದು ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು.
ಇದೇ ವೇಳೆ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಎಂ.ಬಿ.ಪಾಟೀಲ್ ಅವರು, ಕರ್ನಾಟಕ ಪೆವಿಲಿಯನ್, ಟೊಯೋಟಾ, ಎಂಬೆಸಿ ಗ್ರೂಪ್, ರಾಜ್ಯ ಪ್ರವಾಸೋದ್ಯಮ, ಡ್ರೋನ್ ತಂತ್ರಜ್ಞಾನದ ವೈಶಿಷ್ಟ್ಯಪೂರ್ಣ ಮಜಲುಗಳನ್ನು ಕುತೂಹಲದಿಂದ ವೀಕ್ಷಿಸಿ, ಅವುಗಳ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೇ ಕೃಷಿಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಹೊತ್ತು ತರಲಿವೆ. ಜೊತೆಗೆ ಅಗ್ರಿ-ಟೆಕ್ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ರೋಗಪತ್ತೆ ಹಾಗೂ ಚಿಕಿತ್ಸೆಗಳನ್ನು ಸುಲಭವಾಗಿಸುವ ಆರೋಗ್ಯ ಸೇವೆಗಳ ತಂತ್ರಜ್ಞಾನಗಳ ಬಗ್ಗೆಯೂ ತಿಳಿದುಕೊಂಡಿದ್ದಾರೆ.
ಈ ಪ್ರದರ್ಶನದ ಕುರಿತು ಸಚಿವ ಎಂ.ಬಿ.ಪಾಟೀಲ್ ಅವರು ಮಾತನಾಡಿ, ಇಂದಿನ ಸಮಾವೇಶದಲ್ಲಿ 40ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಿವೆ. ಈ ಪೈಕಿ ಜಾಗತಿಕ ಮಟ್ಟದ ಕಂಪನಿಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ನವೋದ್ಯಮಗಳೆರಡೂ ಇವೆ. ಇದರೊಂದಿಗೆ ಡ್ರೋನ್, ಬಾಹ್ಯಾಕಾಶ, ಕೃಷಿ, ಆರೋಗ್ಯ, ಉತ್ಪಾದನಾ ವಲಯ, ವೈಮಾಂತರಿಕ್ಷ, ರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನ ಧಾರೆಗಳನ್ನು ಇಲ್ಲಿ ನೋಡಬಹುದು ಎಂದು ತಿಳಿಸಿದರು.
ಇನ್ನೂ ಪ್ರಮುಖವಾಗಿ ಈ ಸಮಾವೇಶದಲ್ಲಿ ಮರುಬಳಕೆ ಇಂಧನ, ಸೆಮಿಕಂಡಕ್ಟರ್, ವಿದ್ಯುಚ್ಚಾಲಿತ ವಾಹನಗಳು ಹಾಗೂ ಸುಸ್ಥಿರ ಉತ್ಪಾದನೆಗೆ ಹೆಸರಾದ ಕಂಪನಿಗಳು ಭಾಗವಹಿಸಿವೆ. ರಾಜ್ಯದ ಸಾಧನೆಗಳನ್ನು ಬಿಂಬಿಸುವ ಪ್ರತ್ಯೇಕ ಕರ್ನಾಟಕ ಪೆವಿಲಿಯನ್ ಸಹ ಇದೆ. ಇಂದು ಪಾಲ್ಗೊಂಡಿರುವ ಕಂಪೆನಿಗಳಲ್ಲಿ ಜಿ.ಇ. ಹೆಲ್ತ್ಕೇರ್, ಹಿರೋ ಫ್ಯೂಚರ್ ಇಂಜಿನಿಯರ್ಸ್, ರಿವರ್ ಮೊಬಿಲಿಟಿ, ಸರಳಾ ಏವಿಯೇಷನ್, ಗೆಲಾಕ್ಸಿ ಸ್ಪೇಸ್ ಹಾಗೂ ಲ್ಯಾಮ್ ರೀಸರ್ಚ್ ಮುಖ್ಯವಾಗಿದೆ. ಅಲ್ಲದೇ ಕರ್ನಾಟಕ ಪೆವಿಲಿಯನ್ನಲ್ಲಿ ಕ್ವಿನ್ ಸಿಟಿ, ಫ್ಲೈಯಿಂಗ್ ವೆಡ್ಜ್, ಬೆಲ್ಲಾಟ್ರಿಕ್ಸ್, ಸ್ಕೀಸರ್ವ್ ಮತ್ತು ಫ್ಲಕ್ಸ್ ಆಟೋ ಸೇರಿದಂತೆ ಮುಂತಾದ ಉದ್ಯಮಗಳಿವೆ ಎಂದು ಹೇಳಿದ್ದಾರೆ.
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…