ರಾಜ್ಯ

ಫ್ಯೂಚರ್‌ ಆಫ್‌ ಇನ್ನೋವೇಶನ್‌ ಎಕ್ಸ್-ಪೋಗೆ ಚಾಲನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್‌ ಆಫ್‌  ಇನ್ನೋವೇಶನ್‌ ಎಕ್ಸ್‌-ಪೋಗೆ ಚಾಲನೆ ನೀಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆಯಿಂದ ಇನ್‌ವೆಸ್ಟ್‌ ಕರ್ನಾಟಕ ಕಾರ್ಯಕ್ರಮ ನಡೆಯುತ್ತಿದ್ದು, ಇಂದು(ಫೆಬ್ರವರಿ.12) ಈ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ ಚಾಲನೆ ನೀಡಿ ಮಾತನಾಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಯುವಜನತೆಯ ಗಮನ ಸೆಳೆಯುತ್ತಿರುವುದೆನೆಂದರೆ ನಾಳಿನ ನಮ್ಮ ಜಗತ್ತಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ನಾವೀನ್ಯತೆ ಆಗಿದೆ. ಹೀಗಾಗಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಇಂದು ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು.

ಇದೇ ವೇಳೆ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವ ಎಂ.ಬಿ.ಪಾಟೀಲ್‌ ಅವರು, ಕರ್ನಾಟಕ ಪೆವಿಲಿಯನ್, ಟೊಯೋಟಾ, ಎಂಬೆಸಿ ಗ್ರೂಪ್, ರಾಜ್ಯ ಪ್ರವಾಸೋದ್ಯಮ, ಡ್ರೋನ್ ತಂತ್ರಜ್ಞಾನದ ವೈಶಿಷ್ಟ್ಯಪೂರ್ಣ ಮಜಲುಗಳನ್ನು ಕುತೂಹಲದಿಂದ ವೀಕ್ಷಿಸಿ, ಅವುಗಳ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೇ ಕೃಷಿಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಹೊತ್ತು ತರಲಿವೆ. ಜೊತೆಗೆ ಅಗ್ರಿ-ಟೆಕ್‌ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ರೋಗಪತ್ತೆ ಹಾಗೂ ಚಿಕಿತ್ಸೆಗಳನ್ನು ಸುಲಭವಾಗಿಸುವ ಆರೋಗ್ಯ ಸೇವೆಗಳ ತಂತ್ರಜ್ಞಾನಗಳ ಬಗ್ಗೆಯೂ ತಿಳಿದುಕೊಂಡಿದ್ದಾರೆ.

ಈ ಪ್ರದರ್ಶನದ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಮಾತನಾಡಿ, ಇಂದಿನ ಸಮಾವೇಶದಲ್ಲಿ 40ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಿವೆ. ಈ ಪೈಕಿ ಜಾಗತಿಕ ಮಟ್ಟದ ಕಂಪನಿಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ನವೋದ್ಯಮಗಳೆರಡೂ ಇವೆ. ಇದರೊಂದಿಗೆ ಡ್ರೋನ್, ಬಾಹ್ಯಾಕಾಶ, ಕೃಷಿ, ಆರೋಗ್ಯ, ಉತ್ಪಾದನಾ ವಲಯ, ವೈಮಾಂತರಿಕ್ಷ, ರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನ ಧಾರೆಗಳನ್ನು ಇಲ್ಲಿ ನೋಡಬಹುದು ಎಂದು ತಿಳಿಸಿದರು.

ಇನ್ನೂ ಪ್ರಮುಖವಾಗಿ ಈ ಸಮಾವೇಶದಲ್ಲಿ ಮರುಬಳಕೆ ಇಂಧನ, ಸೆಮಿಕಂಡಕ್ಟರ್, ವಿದ್ಯುಚ್ಚಾಲಿತ ವಾಹನಗಳು ಹಾಗೂ ಸುಸ್ಥಿರ ಉತ್ಪಾದನೆಗೆ ಹೆಸರಾದ ಕಂಪನಿಗಳು ಭಾಗವಹಿಸಿವೆ. ರಾಜ್ಯದ ಸಾಧನೆಗಳನ್ನು ಬಿಂಬಿಸುವ ಪ್ರತ್ಯೇಕ ಕರ್ನಾಟಕ ಪೆವಿಲಿಯನ್‌ ಸಹ ಇದೆ. ಇಂದು ಪಾಲ್ಗೊಂಡಿರುವ ಕಂಪೆನಿಗಳಲ್ಲಿ ಜಿ.ಇ. ಹೆಲ್ತ್‌ಕೇರ್‌, ಹಿರೋ ಫ್ಯೂಚರ್‌ ಇಂಜಿನಿಯರ್ಸ್‌, ರಿವರ್‌ ಮೊಬಿಲಿಟಿ, ಸರಳಾ ಏವಿಯೇಷನ್‌, ಗೆಲಾಕ್ಸಿ ಸ್ಪೇಸ್‌ ಹಾಗೂ ಲ್ಯಾಮ್ ರೀಸರ್ಚ್ ಮುಖ್ಯವಾಗಿದೆ. ಅಲ್ಲದೇ ಕರ್ನಾಟಕ ಪೆವಿಲಿಯನ್‌ನಲ್ಲಿ ಕ್ವಿನ್‌ ಸಿಟಿ, ಫ್ಲೈಯಿಂಗ್‌ ವೆಡ್ಜ್‌, ಬೆಲ್ಲಾಟ್ರಿಕ್ಸ್‌, ಸ್ಕೀಸರ್ವ್‌ ಮತ್ತು ಫ್ಲಕ್ಸ್‌ ಆಟೋ ಸೇರಿದಂತೆ ಮುಂತಾದ ಉದ್ಯಮಗಳಿವೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬಲಪ್ರಯೋಗದ ಮೂಲಕ ಜನರ ಧ್ವನಿ ಅಡಗಿಸಲು ಯತ್ನ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ನೀಟ್‌ ಪರೀಕ್ಷೆ ಅಕ್ರಮ ಹಾಗೂ ಜಂತರ್‌ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ…

3 hours ago

ಸಂಸತ್‌ ಮುಂಗಾರು ಅಧಿವೇಶನ: ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ

ನವದೆಹಲಿ: ಇಂದಿನಿಂದ ಸಂಸತ್‌ ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.…

5 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ: ಜಾಗೃತ ಕರ್ನಾಟಕ ಆತಂಕ

ಅರ್ಹರು ಮತ ಹಕ್ಕು ಕಳೆದುಕೊಳ್ಳುವ ಆತಂಕ; ಚುನಾವಣಾ ಆಯೋಗಕ್ಕೆ ‘ಜಾಗೃತ ಕರ್ನಾಟಕ’ ಸಮಯೋಚಿತ ಪ್ರಶ್ನೆ ಕರ್ನಾಟಕದಲ್ಲಿ ಮತದಾನದ ಹಕ್ಕು ಕಳೆದುಕೊಳ್ಳುವ…

7 hours ago

ವಾಂಗ್ಚುಕ್ ಹೋರಾಟ ಕುರಿತು ನಿರ್ಲಕ್ಷ್ಯ ಸಲ್ಲದು

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸುಮಾರು ೨೦ ದಿನಗಳ ಕಾಲ…

10 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂಪುಟ ವಿಸ್ತರಣೆ ನಿರೀಕ್ಷೆ: ಸಂಕಟ ಪರೀಕ್ಷೆ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಈವಾರ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಅಂದ ಹಾಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಈಗಾಗಲೇ…

10 hours ago

ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ

ಕೃಷ್ಣ ಸಿದ್ದಾಪುರ ಸ್ಥಳೀಯರು ಜೀವಭಯದಿಂದ ವಾಸಿಸಬೇಕಾದ ಪರಿಸ್ಥಿತಿ; ಶಾಶ್ವತ ಪರಿಹಾರಕ್ಕೆ ಒತ್ತಾಯ ಸಿದ್ದಾಪುರ: ಕೊಡಗು ಜಿಲ್ಲೆಯ ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ…

10 hours ago