ರಾಜ್ಯ

ವಿಶೇಷ ಆಹ್ವಾನದ ಮೇರೆಗೆ ಅಮೆರಿಕಾಕ್ಕೆ ಹೊರಟ ಡಿಸಿಎಂ ಡಿಕೆ ಶಿವಕುಮಾರ್…‌

ಬೆಂಗಳೂರು: ಉಪ ಮುಖ್ಯಂತ್ರಿ ಡಿಕೆ ಶಿವಕುಮಾರ್‌ ವಿಶೇಷ ಆಹ್ವಾನದ ಮೇರೆಗೆ ಅಮೆರಿಕಾಗೆ ಇಂದು ರಾತ್ರಿಯೇ ಹೊರಡಲಿದ್ದಾರೆ. ಇಂದಿನಿಂದ ಏಳು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ತಮ್ಮ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ನೀಡಿದ್ದಾರೆ.

ಅಮೆರಿಕಾದ ಅಧ್ಯಕ್ಷೀಯ ಚುನಾವಣಾ ರಂಗೇರಿದೆ. ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿಸಿರುವ ಕಮಲ ಹ್ಯಾರಿಸ್‌ ಅವರ ಆಹ್ವಾನದ ಮೇರೆಗೆ ಡಿ.ಕೆ ಶಿವಕುಮಾರ್‌ ಖಾಸಗಿ ಹಾಗೂ ರಾಜತಾಂತ್ರಿಕ ಸಮಾವೇಶದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಮಲಾ ಹ್ಯಾರಿಸ್‌ ಅವರು ಪ್ರಜಾಪ್ರಭುತ್ವ ಮತ್ತು ಚುನಾವಣೆ ಕುರಿತ ಸಂವಾದವನ್ನು ಆಯೋಜಿಸಿದ್ದಾರೆ. ಅದರಲ್ಲಿ ಭಾಗವಹಿಸಲು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಸೇರಿದಂತೆ ಹಲವರನ್ನು ಆಹ್ವಾನಿಸಿದ್ದು, ಅದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಅವರೂ ಕೂಡ ಆಹ್ವಾನಿತರಾಗಿದ್ದಾರೆ.

ಇನ್ನು ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, ನಾನು ಒಂದು ವಾರ ಇರಲ್ಲ. ಅಮೆರಿಕಾ ಪ್ರವಾಸ ಕೈಗೊಂಡಿದ್ದೇನೆ. ಅಮೆರಿಕಾದಲ್ಲಿ ಖಾಸಗಿ ಕಾರ್ಯಕ್ರಮವಿದೆ, ಯಾರನ್ನೂ ಭೇಟಿ ಆಗಲ್ಲ. ವಿಶೇಷ ಫ್ಯಾಮಿಲಿ ಟ್ರಿಪ್‌ ಇದು, ಕುಟುಂಬ ಸಮೇತ ಹೋಗುತ್ತಿದ್ದೇವೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

14 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

18 mins ago