ರಾಜ್ಯ

ನಮ್ಮ ಸರ್ಕಾರ ರಾಜ್ಯದ ನೆಲ, ಜಲ ಹಿತಕ್ಕಾಗಿ ಬದ್ಧವಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಆದಎ ನಮ್ಮ ಸರ್ಕಾರ ರಾಜ್ಯದ ನೆಲ, ಜಲ ಮತ್ತು ಹಿತಕ್ಕಾಗಿ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು(ಫೆಬ್ರವರಿ.16) ನೀರಾವರಿ ವಿಚಾರವಾಗಿ ಪಕ್ಷಾತೀತ ಹೋರಾಟ ಮಾಡಬೇಕು ಎಂಬ ದೇವೇಗೌಡ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹದಾಯಿ ವಿಚಾರವಾಗಿ ನಾವೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಇದು ಅವರ ಹೋರಾಟ ಮಾತ್ರವಲ್ಲ, ರಾಜ್ಯದ ಹೋರಾಟವಾಗಿದೆ. ಅವರು ಅಧಿಕಾರದಲ್ಲಿರುವಾಗ ಹೋರಾಟ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದರು.

ನಮ್ಮ ಪಕ್ಷ ಮೇಕೆದಾಟು ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ಅದ ಅಗತ್ಯವೂ ನಮಗೆ ಇಲ್ಲ. ಅವರಿಗೆ ರಾಜಕಾರಣ ಮಾಡಿ ರೂಢಿ ಇರಬಹುದು. ನಾವು ಹೋರಾಟ ಮಾಡಿದಾಗ ಅವರು ಯಾವ ರೀತಿ ಟೀಕೆ ಮಾಡಿದ್ದಾರೆ ಎಂಬುದನ್ನು ನೋಡಿದ್ದೇವೆ. ಆದರೆ ನಮ್ಮ ಸರ್ಕಾರ ಅದನ್ನು ಮರೆತು ರಾಜ್ಯದ ಹಿತಕ್ಕಾಗಿ ನೀರಾವರಿ ಯೋಜನೆಗೆ ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಇನ್ನು ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ರೂ. ಘೋಷಣೆ ಮಾಡಿದ್ದು, ಅದನ್ನು ಇದುವರೆಗೂ ಬಿಡುಗಡೆಗೊಳಿಸಿಲ್ಲ. ಅದನ್ನು ಅವರು ಎಂದಾದರೂ ಸಂಸತ್ತಿನಲ್ಲಿ ಪ್ರಶ್ನಿಸಿದ್ದಾರಾ? ನಮ್ಮ ರಾಜ್ಯದವರಾಗಿರುವ ಎಚ್‌.ಡಿ.ಕುಮಾಸ್ವಾಮಿ, ಕೇಂದ್ರ ಸಚಿವರು ಹಾಗೂ ಸಂಸದರು ಧ್ವನಿ ಎತ್ತುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಆ ಕೆಲಸದಲ್ಲೂ ವಿಫಲರಾಗಿದ್ದಾರೆ. ಹೀಗಾಗಿ ಅವರು ಮೊದಲು ಆ ಕೆಲಸ ಮಾಡಲಿ, ನಮ್ಮಿಂದ ಯಾವ ಸಹಕಾರ ಬೇಕು ಹೇಳಲಿ ನಾವು ನೀಡುತ್ತೇವೆ. ಕಾವೇರಿ ಗೋದಾವರಿ ಜೋಡಣೆ ಮಾಡಿದರೆ ಸಂತೋಷ, ಇಲ್ಲಿಂದಲೇ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಬೆಂಗಳೂರು ನೀರಿನ ವಿಚಾರವಾಗಿ ಮಾತನಾಡಿದ ಅವರು, ಅವರ ಪಕ್ಷದ ನಾಯಕರಿಂದ ಗೊಂದಲದ ಹೇಳಿಕೆ ನೀಡಿಸುತ್ತಿದ್ದಾರೆ. ಈ ಬಗ್ಗೆ ಡಿ.ಸಿ.ತಮ್ಮಣ್ಣ ಅವರಿಗೆ ಯಾವುದೇ ಮಾಹಿತಿ ಇಲ್ಲ. ಈ ವಿಚಾರದಲ್ಲಿ ಡಿಪಿಆರ್ ಸಿದ್ಧಪಡಿಸಿದ್ದಾರೆ ಅಷ್ಟೇ. ಆದರೆ ಇನ್ನು ನಿರ್ಧಾರಿಸಿಲ್ಲ, ನಾನು ಅಧಿಕಾರಕ್ಕೆ ಬಂದ ತಕ್ಷಣವೇ ಬೆಂಗಳೂರಿಗೆ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಅಲ್ಲದೇ ಈ ಸಂಬಂಧ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

8 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago