Categories: ರಾಜ್ಯ

ಸಂವಿಧಾನ ಬದಲಾಯಿಸುತ್ತೇವೆ ಎಂದವರನ್ನು ಜನ ಬದಲಾಯಿಸಿದರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇಶದ ಸಂವಿಧಾನವನ್ನು ಹರಿದು ಹಾಕುತ್ತೇವೆ ಎಂದವರು ಮನೆಗೆ ಹೋಗಿದ್ದಾರೆ. ಇನ್ನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿ ನಾಯಕರನ್ನು ಜನರು ಬದಲಾಯಿಸಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ವಸಂತನಗರದಲ್ಲಿ ಇಂದು(ನ.26) ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದವರಿಗೆ ತಿರುಗೇಟು ನೀಡಲು ಸಂಸದ ರಾಹುಲ್‌ ಗಾಂಧಿಯವರು ಪ್ರತಿಯೊಂದು ಭಾಷಣದ ವೇಳೆ ಸಂವಿಧಾನದ ಪ್ರತಿ ಹಿಡಿದು ಭಾಷಣವನ್ನು ಆರಂಭಿಸುತ್ತಿದ್ದರು. ಹೀಗಾಗಿ ಪ್ರಧಾನಮಂತ್ರಿ ಅವರು ಕೂಡ ಸಂವಿಧಾನ ಪ್ರತಿಗೆ ನಮಸ್ಕರಿಸಿ ಪ್ರಮಾಣ ವಚನ ಸ್ವೀಕಾರ ಮಾಡುವಂತಾಯಿತು. ಅಲ್ಲದೇ ನಮ್ಮ ಇಂಡಿಯಾ ಒಕ್ಕೂಟದ ಸಂಸದರು ಸಂವಿಧಾನ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ಎಂದು ಇತಿಹಾಸ ಎಂದು ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೋರಾಟ ಮಾಡದೇ ಇದ್ದರೂ ಪರವಾಗಿಲ್ಲ ಮಾರಾಟ ಮಾತ್ರ ಆಗಬೇಡ ಎಂಬ ಕಿವಿ ಮಾತನ್ನು ರಾಜಕಾರಣಿಗಳಿಗರ ಹೇಳಿದ್ದರು. ಬಳಿಕ ನಾವುಗಳು ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸಂದೇಶವನ್ನು ನೀಡಿದ್ದರು. ಆದರೆ ಪ್ರಸ್ತುತ ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಜನರಿಂದ ಆಯ್ಕೆಯಾದ ಶಾಸಕರು ಮಾರಾಟವಾಗಿರುವ ನಿದರ್ಶನಗಳನ್ನು ನೋಡುತ್ತಿದ್ದೇವೆ. ಇತಿಹಾಸವನ್ನು ಮರೆತವನು ಇತಿಹಾಸವನ್ನು ಸೃಷ್ಠಿಸಲು ಸಾಧ್ಯವಿಲ್ಲ ಎಂದು ಕಿವಿಮಾತನ್ನು ಬಿಟ್ಟು ಹೋಗಿದ್ದಾರೆ. ಅದರಂತೆಯೇ ಆಯಾಯ ಧರ್ಮದವರು ಅವರ ಧರ್ಮ ಗ್ರಂಥಗಳನ್ನು ಪವಿತ್ರ ಎಂದು ಹೇಳುತ್ತಾರೋ, ಹಾಗೇಯೇ ಇಡೀ ಭಾರತಕ್ಕೆ ಸಂವಿಧಾನವೇ ಪವಿತ್ರ ಗ್ರಂಥವಾಗಿದೆ ಎಂದಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಡೀಮ್ಡ್‌ ಅರಣ್ಯ ಪ್ರದೇಶ ಗುರುತಿಸುವಿಕೆಗೆ ಸಮಿತಿ ರಚನೆ : ಈಶ್ವರ ಖಂಡ್ರೆ

ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…

3 mins ago

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…

6 mins ago

ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…

12 mins ago

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

17 mins ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…

21 mins ago

ಮೈಸೂರು | 21 ರಂದು ಪಲ್ಸ್ ಪೋಲಿಯೋ ಅಭಿಯಾನ

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…

1 hour ago