Categories: ರಾಜ್ಯ

ಸಂವಿಧಾನ ಬದಲಾಯಿಸುತ್ತೇವೆ ಎಂದವರನ್ನು ಜನ ಬದಲಾಯಿಸಿದರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇಶದ ಸಂವಿಧಾನವನ್ನು ಹರಿದು ಹಾಕುತ್ತೇವೆ ಎಂದವರು ಮನೆಗೆ ಹೋಗಿದ್ದಾರೆ. ಇನ್ನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿ ನಾಯಕರನ್ನು ಜನರು ಬದಲಾಯಿಸಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ವಸಂತನಗರದಲ್ಲಿ ಇಂದು(ನ.26) ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದವರಿಗೆ ತಿರುಗೇಟು ನೀಡಲು ಸಂಸದ ರಾಹುಲ್‌ ಗಾಂಧಿಯವರು ಪ್ರತಿಯೊಂದು ಭಾಷಣದ ವೇಳೆ ಸಂವಿಧಾನದ ಪ್ರತಿ ಹಿಡಿದು ಭಾಷಣವನ್ನು ಆರಂಭಿಸುತ್ತಿದ್ದರು. ಹೀಗಾಗಿ ಪ್ರಧಾನಮಂತ್ರಿ ಅವರು ಕೂಡ ಸಂವಿಧಾನ ಪ್ರತಿಗೆ ನಮಸ್ಕರಿಸಿ ಪ್ರಮಾಣ ವಚನ ಸ್ವೀಕಾರ ಮಾಡುವಂತಾಯಿತು. ಅಲ್ಲದೇ ನಮ್ಮ ಇಂಡಿಯಾ ಒಕ್ಕೂಟದ ಸಂಸದರು ಸಂವಿಧಾನ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ಎಂದು ಇತಿಹಾಸ ಎಂದು ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೋರಾಟ ಮಾಡದೇ ಇದ್ದರೂ ಪರವಾಗಿಲ್ಲ ಮಾರಾಟ ಮಾತ್ರ ಆಗಬೇಡ ಎಂಬ ಕಿವಿ ಮಾತನ್ನು ರಾಜಕಾರಣಿಗಳಿಗರ ಹೇಳಿದ್ದರು. ಬಳಿಕ ನಾವುಗಳು ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸಂದೇಶವನ್ನು ನೀಡಿದ್ದರು. ಆದರೆ ಪ್ರಸ್ತುತ ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಜನರಿಂದ ಆಯ್ಕೆಯಾದ ಶಾಸಕರು ಮಾರಾಟವಾಗಿರುವ ನಿದರ್ಶನಗಳನ್ನು ನೋಡುತ್ತಿದ್ದೇವೆ. ಇತಿಹಾಸವನ್ನು ಮರೆತವನು ಇತಿಹಾಸವನ್ನು ಸೃಷ್ಠಿಸಲು ಸಾಧ್ಯವಿಲ್ಲ ಎಂದು ಕಿವಿಮಾತನ್ನು ಬಿಟ್ಟು ಹೋಗಿದ್ದಾರೆ. ಅದರಂತೆಯೇ ಆಯಾಯ ಧರ್ಮದವರು ಅವರ ಧರ್ಮ ಗ್ರಂಥಗಳನ್ನು ಪವಿತ್ರ ಎಂದು ಹೇಳುತ್ತಾರೋ, ಹಾಗೇಯೇ ಇಡೀ ಭಾರತಕ್ಕೆ ಸಂವಿಧಾನವೇ ಪವಿತ್ರ ಗ್ರಂಥವಾಗಿದೆ ಎಂದಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

59 mins ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

1 hour ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

2 hours ago

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

4 hours ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

5 hours ago

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

5 hours ago