Categories: ರಾಜ್ಯ

ಸಂವಿಧಾನ ಬದಲಾಯಿಸುತ್ತೇವೆ ಎಂದವರನ್ನು ಜನ ಬದಲಾಯಿಸಿದರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇಶದ ಸಂವಿಧಾನವನ್ನು ಹರಿದು ಹಾಕುತ್ತೇವೆ ಎಂದವರು ಮನೆಗೆ ಹೋಗಿದ್ದಾರೆ. ಇನ್ನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿ ನಾಯಕರನ್ನು ಜನರು ಬದಲಾಯಿಸಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ವಸಂತನಗರದಲ್ಲಿ ಇಂದು(ನ.26) ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದವರಿಗೆ ತಿರುಗೇಟು ನೀಡಲು ಸಂಸದ ರಾಹುಲ್‌ ಗಾಂಧಿಯವರು ಪ್ರತಿಯೊಂದು ಭಾಷಣದ ವೇಳೆ ಸಂವಿಧಾನದ ಪ್ರತಿ ಹಿಡಿದು ಭಾಷಣವನ್ನು ಆರಂಭಿಸುತ್ತಿದ್ದರು. ಹೀಗಾಗಿ ಪ್ರಧಾನಮಂತ್ರಿ ಅವರು ಕೂಡ ಸಂವಿಧಾನ ಪ್ರತಿಗೆ ನಮಸ್ಕರಿಸಿ ಪ್ರಮಾಣ ವಚನ ಸ್ವೀಕಾರ ಮಾಡುವಂತಾಯಿತು. ಅಲ್ಲದೇ ನಮ್ಮ ಇಂಡಿಯಾ ಒಕ್ಕೂಟದ ಸಂಸದರು ಸಂವಿಧಾನ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ಎಂದು ಇತಿಹಾಸ ಎಂದು ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೋರಾಟ ಮಾಡದೇ ಇದ್ದರೂ ಪರವಾಗಿಲ್ಲ ಮಾರಾಟ ಮಾತ್ರ ಆಗಬೇಡ ಎಂಬ ಕಿವಿ ಮಾತನ್ನು ರಾಜಕಾರಣಿಗಳಿಗರ ಹೇಳಿದ್ದರು. ಬಳಿಕ ನಾವುಗಳು ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸಂದೇಶವನ್ನು ನೀಡಿದ್ದರು. ಆದರೆ ಪ್ರಸ್ತುತ ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಜನರಿಂದ ಆಯ್ಕೆಯಾದ ಶಾಸಕರು ಮಾರಾಟವಾಗಿರುವ ನಿದರ್ಶನಗಳನ್ನು ನೋಡುತ್ತಿದ್ದೇವೆ. ಇತಿಹಾಸವನ್ನು ಮರೆತವನು ಇತಿಹಾಸವನ್ನು ಸೃಷ್ಠಿಸಲು ಸಾಧ್ಯವಿಲ್ಲ ಎಂದು ಕಿವಿಮಾತನ್ನು ಬಿಟ್ಟು ಹೋಗಿದ್ದಾರೆ. ಅದರಂತೆಯೇ ಆಯಾಯ ಧರ್ಮದವರು ಅವರ ಧರ್ಮ ಗ್ರಂಥಗಳನ್ನು ಪವಿತ್ರ ಎಂದು ಹೇಳುತ್ತಾರೋ, ಹಾಗೇಯೇ ಇಡೀ ಭಾರತಕ್ಕೆ ಸಂವಿಧಾನವೇ ಪವಿತ್ರ ಗ್ರಂಥವಾಗಿದೆ ಎಂದಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago