ಬೆಂಗಳೂರು: ಒಕ್ಕಲಿಗರ ಸಂಘದ ವತಿಯಿಂದ ಈಗಲೇ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸುವುದು ಬೇಡ. ಸಭೆಯನ್ನು ಮುಂದೂಡಿ ಯಾರಿಗೂ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಇಂದು(ಜನವರಿ.12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದೇ ಒಕ್ಕಲಿಗ ಪದಾಧಿಕಾರಿಗಳೊಂದಿಗೆ ಯಾವುದೇ ಸಭೆ ನಡೆಸಿಲ್ಲ. ಅವರು ಹೊಸ ವರ್ಷದ ಶುಭಾಶಯ ಕೋರಲು ನನ್ನ ಗೃಹ ಕಚೇರಿಗೆ ಭೇಟಿ ನೀಡಿದ್ದರು ಅಷ್ಟೇ. ಆ ವೇಳೆ ನಾನು ಸಮುದಾಯದ ಹಲವು ವಿಚಾರಗಳ ಬಗ್ಗೆ ಚರ್ಚಿಸಿದೆ. ಅದರಲ್ಲಿ ಇದು ಕೂಡ ಒಂದಾಗಿದ್ದು, ಸಮುದಾಯದ ಪದಾಧಿಕಾರಿಗಳು ಇಂದು ಜಾತಿ ಗಣತಿ ವಿಚಾರವಾಗಿ ಪ್ರತ್ಯೇಕವಾಗಿ ಸಭೆ ನಡೆಸಬೇಕು ಎಂದು ತೀರ್ಮಾನಿಸಿದ್ದರು. ಆದರೆ ನಾನು ಆ ಸಭೆಯಲ್ಲಿ ಭಾಗವಹಿಸುವುದಿಲ್ಲ. ಜಾತಿ ಗಣತಿ ವಿಚಾರಕ್ಕಾಗಿ ಈಗಲೇ ಸಭೆಯನ್ನು ನಡೆಸುವುದು ಬೇಡ. ನಾನು ಈ ವಿಚಾರವಾಗಿ ಶ್ರೀಗಳೊಂದಿಗೆ ಮಾತನಾಡುತ್ತೇನೆ ಎಂದಿರುವೆ ಎಂದು ಹೇಳಿದರು.
ಇನ್ನೂ ಒಕ್ಕಲಿಗರ ಸಂಘದ ಹೊಸ ಪದಾಧಿಕಾರಿಗಳ ತಂಡ ರಾಜಿ ಮಾಡಿಕೊಂಡು ನನ್ನನ್ನು ಭೇಟಿಯಾಗಲು ಬಂದಿದ್ದರು. ಆಗ ನಾನು ಸಮುದಾಯದ ಪದಾಧಿಕಾರಿಗಳ ಮಧ್ಯೆ ಮತ್ತೆ ಯಾವುದೇ ಒಳಜಗಳು ಬೇಡ. ಒಂದು ವೇಳೆ ಕಿತ್ತಾಟವಾದರೆ ಆ ನಂತರ ಆಡಳಿತಾಧಿಕಾರಿ ನೇಮಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದೇನೆ. ಅಲ್ಲದೇ ಎಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಬೇಕು. ಜಾತಿ ಗಣತಿ ಸಭೆಯನ್ನು ಮುಂದೂಡಿ, ನಾವು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಲಾಗಿದೆ ಎಂದು ತಿಳಿಸಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…