ರಾಜ್ಯ

ಒಕ್ಕಲಿಗರ ಸಭೆ ಮುಂದೂಡಿ, ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಒಕ್ಕಲಿಗರ ಸಂಘದ ವತಿಯಿಂದ ಈಗಲೇ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸುವುದು ಬೇಡ. ಸಭೆಯನ್ನು ಮುಂದೂಡಿ ಯಾರಿಗೂ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಇಂದು(ಜನವರಿ.12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದೇ ಒಕ್ಕಲಿಗ ಪದಾಧಿಕಾರಿಗಳೊಂದಿಗೆ ಯಾವುದೇ ಸಭೆ ನಡೆಸಿಲ್ಲ. ಅವರು ಹೊಸ ವರ್ಷದ ಶುಭಾಶಯ ಕೋರಲು ನನ್ನ ಗೃಹ ಕಚೇರಿಗೆ ಭೇಟಿ ನೀಡಿದ್ದರು ಅಷ್ಟೇ. ಆ ವೇಳೆ ನಾನು ಸಮುದಾಯದ ಹಲವು ವಿಚಾರಗಳ ಬಗ್ಗೆ ಚರ್ಚಿಸಿದೆ. ಅದರಲ್ಲಿ ಇದು ಕೂಡ ಒಂದಾಗಿದ್ದು, ಸಮುದಾಯದ ಪದಾಧಿಕಾರಿಗಳು ಇಂದು ಜಾತಿ ಗಣತಿ ವಿಚಾರವಾಗಿ ಪ್ರತ್ಯೇಕವಾಗಿ ಸಭೆ ನಡೆಸಬೇಕು ಎಂದು ತೀರ್ಮಾನಿಸಿದ್ದರು. ಆದರೆ ನಾನು ಆ ಸಭೆಯಲ್ಲಿ ಭಾಗವಹಿಸುವುದಿಲ್ಲ. ಜಾತಿ ಗಣತಿ ವಿಚಾರಕ್ಕಾಗಿ ಈಗಲೇ ಸಭೆಯನ್ನು ನಡೆಸುವುದು ಬೇಡ. ನಾನು ಈ ವಿಚಾರವಾಗಿ ಶ್ರೀಗಳೊಂದಿಗೆ ಮಾತನಾಡುತ್ತೇನೆ ಎಂದಿರುವೆ ಎಂದು ಹೇಳಿದರು.

ಇನ್ನೂ ಒಕ್ಕಲಿಗರ ಸಂಘದ ಹೊಸ ಪದಾಧಿಕಾರಿಗಳ ತಂಡ ರಾಜಿ ಮಾಡಿಕೊಂಡು ನನ್ನನ್ನು ಭೇಟಿಯಾಗಲು ಬಂದಿದ್ದರು. ಆಗ ನಾನು ಸಮುದಾಯದ ಪದಾಧಿಕಾರಿಗಳ ಮಧ್ಯೆ ಮತ್ತೆ ಯಾವುದೇ ಒಳಜಗಳು ಬೇಡ. ಒಂದು ವೇಳೆ ಕಿತ್ತಾಟವಾದರೆ ಆ ನಂತರ ಆಡಳಿತಾಧಿಕಾರಿ ನೇಮಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದೇನೆ. ಅಲ್ಲದೇ ಎಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಬೇಕು. ಜಾತಿ ಗಣತಿ ಸಭೆಯನ್ನು ಮುಂದೂಡಿ, ನಾವು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಲಾಗಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಅಧ್ಯಾಯ ಎರಡು ಇಲ್ಲಿಂದು ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

41 mins ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

49 mins ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

1 hour ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

1 hour ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

12 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

12 hours ago