ಬೆಂಗಳೂರು: ಒಕ್ಕಲಿಗರ ಸಂಘದ ವತಿಯಿಂದ ಈಗಲೇ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸುವುದು ಬೇಡ. ಸಭೆಯನ್ನು ಮುಂದೂಡಿ ಯಾರಿಗೂ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಇಂದು(ಜನವರಿ.12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದೇ ಒಕ್ಕಲಿಗ ಪದಾಧಿಕಾರಿಗಳೊಂದಿಗೆ ಯಾವುದೇ ಸಭೆ ನಡೆಸಿಲ್ಲ. ಅವರು ಹೊಸ ವರ್ಷದ ಶುಭಾಶಯ ಕೋರಲು ನನ್ನ ಗೃಹ ಕಚೇರಿಗೆ ಭೇಟಿ ನೀಡಿದ್ದರು ಅಷ್ಟೇ. ಆ ವೇಳೆ ನಾನು ಸಮುದಾಯದ ಹಲವು ವಿಚಾರಗಳ ಬಗ್ಗೆ ಚರ್ಚಿಸಿದೆ. ಅದರಲ್ಲಿ ಇದು ಕೂಡ ಒಂದಾಗಿದ್ದು, ಸಮುದಾಯದ ಪದಾಧಿಕಾರಿಗಳು ಇಂದು ಜಾತಿ ಗಣತಿ ವಿಚಾರವಾಗಿ ಪ್ರತ್ಯೇಕವಾಗಿ ಸಭೆ ನಡೆಸಬೇಕು ಎಂದು ತೀರ್ಮಾನಿಸಿದ್ದರು. ಆದರೆ ನಾನು ಆ ಸಭೆಯಲ್ಲಿ ಭಾಗವಹಿಸುವುದಿಲ್ಲ. ಜಾತಿ ಗಣತಿ ವಿಚಾರಕ್ಕಾಗಿ ಈಗಲೇ ಸಭೆಯನ್ನು ನಡೆಸುವುದು ಬೇಡ. ನಾನು ಈ ವಿಚಾರವಾಗಿ ಶ್ರೀಗಳೊಂದಿಗೆ ಮಾತನಾಡುತ್ತೇನೆ ಎಂದಿರುವೆ ಎಂದು ಹೇಳಿದರು.
ಇನ್ನೂ ಒಕ್ಕಲಿಗರ ಸಂಘದ ಹೊಸ ಪದಾಧಿಕಾರಿಗಳ ತಂಡ ರಾಜಿ ಮಾಡಿಕೊಂಡು ನನ್ನನ್ನು ಭೇಟಿಯಾಗಲು ಬಂದಿದ್ದರು. ಆಗ ನಾನು ಸಮುದಾಯದ ಪದಾಧಿಕಾರಿಗಳ ಮಧ್ಯೆ ಮತ್ತೆ ಯಾವುದೇ ಒಳಜಗಳು ಬೇಡ. ಒಂದು ವೇಳೆ ಕಿತ್ತಾಟವಾದರೆ ಆ ನಂತರ ಆಡಳಿತಾಧಿಕಾರಿ ನೇಮಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದೇನೆ. ಅಲ್ಲದೇ ಎಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಬೇಕು. ಜಾತಿ ಗಣತಿ ಸಭೆಯನ್ನು ಮುಂದೂಡಿ, ನಾವು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಲಾಗಿದೆ ಎಂದು ತಿಳಿಸಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…