ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾಳೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.
ಡಿ.ಕೆ.ಶಿವಕುಮಾರ್ ಅವರು ಮಂಗಳವಾರ(ಫೆಬ್ರವರಿ.25) ದೆಹಲಿಗೆ ತೆರಳಲಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ನೆರವು, ಮಹದಾಯಿ, ಮೇಕೆದಾಟು ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಪ್ರಸ್ತಾಪಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇನ್ನು ರಾಜ್ಯದ ವಿವಿಧ ಕಡೆ ನಿರ್ಮಿಸಲು ಉದ್ದೇಶಿಸಿರುವ ಪಕ್ಷದ ಕಚೇರಿಗಳಿಗೆ ಶಂಕುಸ್ಥಾಪನೆಗೆ ದಿನಾಂಕ ನಿಗಧಿಪಡಿಸುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಲಿದ್ದಾರೆ. ಅಲ್ಲದೇ ಆ ಎಲ್ಲಾ ಕಾರ್ಯಕ್ರಮಗಳಿಗೂ ಭಾಗವಹಿಸುವಂತೆಯೂ ಆಮಂತ್ರಣ ನೀಡಲಿದ್ದಾರೆ. ಕಚೇರಿ ಕಟ್ಟಡ ನಿರ್ಮಾಣ ಮಾಡುವ ಸ್ಥಳ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ನೋಂದಣಿ ಆಗಿದ್ದರೆ ಅಲ್ಲಿ ಮಾರ್ಚ್.10 ರಂದು ಶಂಕುಸ್ಥಾಪನೆ ನೆರವೇರಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…