ಧರ್ಮಸ್ಥಳ: ಯಾವಾಗಲೂ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಮಂಜುನಾಥನ ದರ್ಶನಕ್ಕೆ ಬಂದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಮಂಗಳವಾರ (ಮಾ.೨೬) ಬೆಳಿಗ್ಗೆ ಧರ್ಮಸ್ಥಳ ದೇಗುಲಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ ಎಂಬ ಮಾತಿದೆ. ನನ್ನ ಜೀವನದಲ್ಲಿ ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿದ್ದಾರೆ. ಹಾಗಾಗಿ ಈ ಯುದ್ಧ ಆರಂಭಿಸುವ ಮುನ್ನ ಮಂಜುನಾಥಸ್ವಾಮಿ, ಅಣ್ಣಪ್ಪಸ್ವಾಮಿ ದರ್ಶನ ಮಾಡಿ ಆಶೀರ್ವಾದ ಪಡೆಯುವ ಪದ್ಧತಿ ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.
ನನ್ನ ಪದ್ಧತಿಯಂತೆ ಇಂದು ಇಲ್ಲಿಗೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ಹೋಗುತ್ತೇನೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ. ಇನ್ನೂ ಹೆಚ್ಚಿಗೆ ಶಕ್ತಿ ನೀಡಿ ಎಂದು ಆ ಭಗವಂತನಲ್ಲಿ ಪ್ರಾರ್ಥನೆ ಮಾಡಲು ಬಂದಿದ್ದೇನೆ. ನುಡಿದಂತೆ ನಡೆಯಲು ಆ ದೇವರು ಶಕ್ತಿ ಕೊಟ್ಟಿದ್ದಾನೆ, ಇದು ನಮ್ಮ ಭಾಗ್ಯ, ಮುಂದೆ ಜನ ತೀರ್ಮಾನ ಮಾಡುತ್ತಾರೆ ಎಂದರು.
ಮಂಜುನಾಥನ ಬಳಿಗೆ ರಾಜ್ಯದ ಮಹಿಳೆಯರು ಉಚಿತವಾಗಿ ಬಂದಿದ್ದಾರೆ. ವ್ಯಾಪಾರ ವಹಿವಾಟು ಜೋರಿದೆ. ಎಲ್ಲರೂ ತೀರ್ಥಯಾತ್ರೆ, ಧರ್ಮಾ ಯಾತ್ರೆ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಜನ ಕೊಟ್ಟ ಶಕ್ತಿ ಅವರಿಗೆ ಋಣವನ್ನು ತೀರಿಸಿದ್ದೇವೆ. ಆ ಉಪಕಾರ ಸ್ಮರಣೆಯನ್ನು ಇಟ್ಟುಕೊಳ್ಳುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಬಳಿಕ ಡಿಕೆ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಈ ವೇಳೆ ಸ್ಥಳೀಯ ಕಾಂಗ್ರೇಸ್ ನಾಯಕರೊಡನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಲೋಕಸಭೆ ಚುನಾವಣೆಯ ಕಣ ರಂಗೇರುತ್ತಿರುವ ಮಧ್ಯಯೇ ಡಿಸಿಎಂ ಡಿಕೆ ಶಿವಕುಮಾರ್ ಇಂದು ಇಡೀ ದಿನ ಟೆಂಪನ್ ರನ್ ಆರಂಭಿಸಿದ್ದಾರೆ.
ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…