ರಾಜ್ಯ

ಅಮೆರಿಕಾ ಪ್ರವಾಸ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಅಮೆರಿಕಾ ಚುನಾವಣೆ ಕಣ ರಂಗೇರಿದೆ. ಅಲ್ಲಿನ ಅಭ್ಯರ್ಥಿಗಳು ಚುನಾವಣೆ ಗೆಲ್ಲಲು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಭಾರತ ಮೂಲದ ಕಮಲ ಹ್ಯಾರಿಸ್‌ ಅವರು ಈ ಬಾರಿ ಡೆಮಾಕ್ರಟಿಕ್‌ ಪಕ್ಷದಿಂದ ಅಮೆರಿಕಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ.

ಹೀಗಾಗಿ, ಕಮಲ ಹ್ಯಾರಿಸ್‌ ಅವರು ಆಯೋಜಿಸಿರುವ ರಾಜಕೀಯ ಸಂವಾದದಲ್ಲಿ ಹಾಗೂ ಇತರ ಕಾರ್ಯಕ್ರಮಗಳಿಗೆ ಡಿಸಿಎಂ ಡಿಕೆ ಶಿವಕುಮಾರ್‌ಗೂ ಆಹ್ವಾನ ಬಂದಿದ್ದು, ಅದಕ್ಕಾಗಿ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸದ್ಯ ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ.

ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್-ಇಸ್ರೇಲ್‌ ಸಂಘರ್ಷ: ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಸಹಾಯವಾಣಿ ಆರಂಭ

ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ…

2 mins ago

ಇರಾನ್-ಇಸ್ರೇಲ್‌ ಸಂಘರ್ಷ: ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದ ಸಚಿವ ಎಚ್‌ಸಿಎಂ

ಮೈಸೂರು: ಇರಾನ್-ಇಸ್ರೇಲ್‌ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು…

16 mins ago

ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ…

28 mins ago

ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು: ಸಚಿವ ಎಂ.ಬಿ.ಪಾಟೀಲ್‌ ಆಗ್ರಹ

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಒತ್ತಾಯಿಸಿದ್ದಾರೆ. ಈ ಕುರಿತು…

2 hours ago

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಸಹಾಯವಾಣಿ ತೆರೆದ ಹಾಸನ ಜಿಲ್ಲಾಡಳಿತ

ಹಾಸನ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ…

2 hours ago

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಇಸ್ರೇಲ್‌ ಪ್ರಧಾನಿ ನೆತನ್ಯಾಹುಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ದಾಳಿತ ನಂತರ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ ಪ್ರಧಾನಿ…

2 hours ago