ರಾಜ್ಯ

ಅಮೆರಿಕಾ ಪ್ರವಾಸ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಅಮೆರಿಕಾ ಚುನಾವಣೆ ಕಣ ರಂಗೇರಿದೆ. ಅಲ್ಲಿನ ಅಭ್ಯರ್ಥಿಗಳು ಚುನಾವಣೆ ಗೆಲ್ಲಲು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಭಾರತ ಮೂಲದ ಕಮಲ ಹ್ಯಾರಿಸ್‌ ಅವರು ಈ ಬಾರಿ ಡೆಮಾಕ್ರಟಿಕ್‌ ಪಕ್ಷದಿಂದ ಅಮೆರಿಕಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ.

ಹೀಗಾಗಿ, ಕಮಲ ಹ್ಯಾರಿಸ್‌ ಅವರು ಆಯೋಜಿಸಿರುವ ರಾಜಕೀಯ ಸಂವಾದದಲ್ಲಿ ಹಾಗೂ ಇತರ ಕಾರ್ಯಕ್ರಮಗಳಿಗೆ ಡಿಸಿಎಂ ಡಿಕೆ ಶಿವಕುಮಾರ್‌ಗೂ ಆಹ್ವಾನ ಬಂದಿದ್ದು, ಅದಕ್ಕಾಗಿ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸದ್ಯ ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ.

ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…

41 mins ago

ಓದುಗರ ಪತ್ರ: ಸ್ವಾಗತಾರ್ಹ ನಡೆ!

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…

43 mins ago

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…

46 mins ago

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…

48 mins ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…

53 mins ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…

56 mins ago