ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿಎಂ-ಡಿಸಿಎಂ ನಡುವೆ ಸಿಎಂ ಕುರ್ಚಿಗಾಗಿ ಕದನ ತಾರಕಕ್ಕೇರುತ್ತಿದ್ದು, ಶಾಸಕರ ಬೆಂಬಲ ಪಡೆಯುವ ಸಂಬಂಧ ಚಟುವಟಿಕೆಗಳು ಚುರುಕುಗೊಂಡಂತೆ ಕಾಣುತ್ತಿದೆ.
ಅತ್ತ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಸಚಿವರು, ಶಾಸಕರು ದಿಲ್ಲಿಯಲ್ಲಿ ಲಾಬಿ ನಡೆಸಲು ಯತ್ನಿಸುತ್ತಿದ್ದರೆ, ಇತ್ತ ಸಿಎಂ ಆಪ್ತ ಶಾಸಕರು, ಸಚಿವರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ.
ಈ ಮಧ್ಯೆ ಜೈಲಿನಲ್ಲಿರುವ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರೊಂದಿಗೆ ಚರ್ಚೆ ನಡೆಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿದ್ದರು.
ಇದನ್ನೂ ಓದಿ:-ಮೈಸೂರಿನ ಈ ಪ್ರದೇಶಗಳಲ್ಲಿ ನ.23 ರಂದು ವಿದ್ಯುತ್ ವ್ಯತ್ಯಯ
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಈ ಹಿಂದೆಯೇ ನವೆಂಬರ್ ಕ್ರಾಂತಿ ಆಗಲಿದೆ ಎಂಬ ಸುದ್ದಿ ವ್ಯಾಪಕವಾಗಿತ್ತು. ಆದರೆ ಈಗ ನವೆಂಬರ್ ಕ್ರಾಂತಿಗೆ ಸಂಬಂಧಿಸಿದ ಚಟುವಟಿಕೆಗಳು ಆರಂಭವಾಗಿವೆ. ಶಾಸಕರ ಬೆಂಬಲ ಪಡೆಯುವ ನಿಟ್ಟಿನಲ್ಲಿ ಸಕ್ರಿಯರಾಗಿರುವ ಡಿ.ಕೆ. ಶಿವಕುಮಾರ್, ಇಬ್ಬರು ಶಾಸಕರ ಜೊತೆ ಮಾತನಾಡಲು ತೆರಳಿದ್ದಾರಾ ಎಂಬ ಚರ್ಚೆಗಳು ಶುರುವಾಗಿವೆ.
ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…
ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್ ಯು.ಟಿ.ಖಾದರ್ ಅವರು…
ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್ಪಾತ್ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…