ರಾಜ್ಯ

ಶಾಸಕರಿಗೆ ಡಿಸಿಎಂ ಗಾಳ : ಪರಪ್ಪನ ಅಗ್ರಹಾರ ಜೈಲಿಗೆ ಡಿಕೆಶಿ ಭೇಟಿ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿಎಂ-ಡಿಸಿಎಂ ನಡುವೆ ಸಿಎಂ ಕುರ್ಚಿಗಾಗಿ ಕದನ ತಾರಕಕ್ಕೇರುತ್ತಿದ್ದು, ಶಾಸಕರ ಬೆಂಬಲ ಪಡೆಯುವ ಸಂಬಂಧ ಚಟುವಟಿಕೆಗಳು ಚುರುಕುಗೊಂಡಂತೆ ಕಾಣುತ್ತಿದೆ.

ಅತ್ತ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಸಚಿವರು, ಶಾಸಕರು ದಿಲ್ಲಿಯಲ್ಲಿ ಲಾಬಿ ನಡೆಸಲು ಯತ್ನಿಸುತ್ತಿದ್ದರೆ, ಇತ್ತ ಸಿಎಂ ಆಪ್ತ ಶಾಸಕರು, ಸಚಿವರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ.

ಈ ಮಧ್ಯೆ ಜೈಲಿನಲ್ಲಿರುವ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರೊಂದಿಗೆ ಚರ್ಚೆ ನಡೆಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿದ್ದರು.

ಇದನ್ನೂ ಓದಿ:-ಮೈಸೂರಿನ ಈ ಪ್ರದೇಶಗಳಲ್ಲಿ ನ.23 ರಂದು ವಿದ್ಯುತ್‌ ವ್ಯತ್ಯಯ

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಈ ಹಿಂದೆಯೇ ನವೆಂಬರ್ ಕ್ರಾಂತಿ ಆಗಲಿದೆ ಎಂಬ ಸುದ್ದಿ ವ್ಯಾಪಕವಾಗಿತ್ತು. ಆದರೆ ಈಗ ನವೆಂಬರ್ ಕ್ರಾಂತಿಗೆ ಸಂಬಂಧಿಸಿದ ಚಟುವಟಿಕೆಗಳು ಆರಂಭವಾಗಿವೆ. ಶಾಸಕರ ಬೆಂಬಲ ಪಡೆಯುವ ನಿಟ್ಟಿನಲ್ಲಿ ಸಕ್ರಿಯರಾಗಿರುವ ಡಿ.ಕೆ. ಶಿವಕುಮಾರ್, ಇಬ್ಬರು ಶಾಸಕರ ಜೊತೆ ಮಾತನಾಡಲು ತೆರಳಿದ್ದಾರಾ ಎಂಬ ಚರ್ಚೆಗಳು ಶುರುವಾಗಿವೆ.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

7 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago