ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿಎಂ-ಡಿಸಿಎಂ ನಡುವೆ ಸಿಎಂ ಕುರ್ಚಿಗಾಗಿ ಕದನ ತಾರಕಕ್ಕೇರುತ್ತಿದ್ದು, ಶಾಸಕರ ಬೆಂಬಲ ಪಡೆಯುವ ಸಂಬಂಧ ಚಟುವಟಿಕೆಗಳು ಚುರುಕುಗೊಂಡಂತೆ ಕಾಣುತ್ತಿದೆ.
ಅತ್ತ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಸಚಿವರು, ಶಾಸಕರು ದಿಲ್ಲಿಯಲ್ಲಿ ಲಾಬಿ ನಡೆಸಲು ಯತ್ನಿಸುತ್ತಿದ್ದರೆ, ಇತ್ತ ಸಿಎಂ ಆಪ್ತ ಶಾಸಕರು, ಸಚಿವರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ.
ಈ ಮಧ್ಯೆ ಜೈಲಿನಲ್ಲಿರುವ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರೊಂದಿಗೆ ಚರ್ಚೆ ನಡೆಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿದ್ದರು.
ಇದನ್ನೂ ಓದಿ:-ಮೈಸೂರಿನ ಈ ಪ್ರದೇಶಗಳಲ್ಲಿ ನ.23 ರಂದು ವಿದ್ಯುತ್ ವ್ಯತ್ಯಯ
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಈ ಹಿಂದೆಯೇ ನವೆಂಬರ್ ಕ್ರಾಂತಿ ಆಗಲಿದೆ ಎಂಬ ಸುದ್ದಿ ವ್ಯಾಪಕವಾಗಿತ್ತು. ಆದರೆ ಈಗ ನವೆಂಬರ್ ಕ್ರಾಂತಿಗೆ ಸಂಬಂಧಿಸಿದ ಚಟುವಟಿಕೆಗಳು ಆರಂಭವಾಗಿವೆ. ಶಾಸಕರ ಬೆಂಬಲ ಪಡೆಯುವ ನಿಟ್ಟಿನಲ್ಲಿ ಸಕ್ರಿಯರಾಗಿರುವ ಡಿ.ಕೆ. ಶಿವಕುಮಾರ್, ಇಬ್ಬರು ಶಾಸಕರ ಜೊತೆ ಮಾತನಾಡಲು ತೆರಳಿದ್ದಾರಾ ಎಂಬ ಚರ್ಚೆಗಳು ಶುರುವಾಗಿವೆ.
ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…
ಎಚ್.ಎಸ್.ದಿನೇಶ್ ಕುಮಾರ್ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…
ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…
ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…
ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…