ರಾಜ್ಯ

ಜನಕಲ್ಯಾಣ ಸಮಾವೇಶ: 2028ಕ್ಕೆ ಕಾಂಗ್ರೆಸ್‌ ಸರ್ಕಾರ ಅಧಿಕಾರ ಬರುವುದು ಖಚಿತ-ಡಿಸಿಎಂ ಡಿಕೆಶಿ

ಹಾಸನ: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ನಿಲ್ಲುವುದಿಲ್ಲ, ರಾಜ್ಯದಲ್ಲಿ ಮತ್ತೊಮ್ಮೆ 2028ಕ್ಕೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಜಿಲ್ಲೆಯ ಎಸ್‌.ಎಂ.ಕೃಷ್ಣನಗರದಲ್ಲಿ ಇಂದು(ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕನಕಪುರದ ಬಂಡೆ ಡಿ.ಕೆ.ಶಿವಕುಮಾರ್‌ ಸಾಯುವವರೆಗೂ ಸಿಎಂ ಸಿದ್ದರಾಮಯ್ಯರ ಜೊತೆಗೆ ಇರುತ್ತದೆ. ನಾವು ಎಲ್ಲಿ ಕೆಲಸ ಮಾಡುತ್ತಿವೋ ಅಲ್ಲಿ ನಾವು ಪ್ರಾಮಾಣಿಕವಾಗಿರುತ್ತೇವೆ ಇದು ನಮ್ಮ ಇತಿಹಾಸ. ಕಾಂಗ್ರೆಸ್‌ ಶಕ್ತಿ, ಇಡೀ ದೇಶದ ಶಕ್ತಿಯಾಗಿದೆ. ಹೀಗಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಸಮುದಾಯಗಳು ಅಧಿಕಾರಕ್ಕೆ ಬಂದಂತೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತವೆ. 2028ಕ್ಕೆ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ. ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ಟೀಕೆಗಳಿಗೆ ಉಪಚುನಾವಣೆಯಲ್ಲಿ ರಾಜ್ಯದ ಜನತೆ ಉತ್ತರ ನೀಡಿದ್ದು, ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಮೂಲಕ ಬೆರೆ ಏರಿಕೆಯಿಂದ ತತ್ತರಿಸಿದ್ದ ಸಮಾಜಕ್ಕೆ ಶಕ್ತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇಡೀ ಜಿಲ್ಲೆಗೆ ಹಾಗೂ ನೊಂದ ತಾಯಂದಿರಿಗೆ ನ್ಯಾಯವನ್ನು ಕೊಡಿಸುವ ಸಲುವಾಗಿ ಹಾಸನದಲ್ಲಿ 25 ವರ್ಷದ ನಂತರ ಲೋಕಸಭೆಯ ಸಂಸದ ಸ್ಥಾನಕ್ಕೆ ಕಾಂಗ್ರೆಸ್‌ನ ಶ್ರೇಯಸ್‌ ಪಟೇಲ್‌ರನ್ನು ಸಂಸದರಾಗಿ ಆರಿಸುವ ಮೂಲಕ ನ್ಯಾಯ ದೊರಕಿಸಿಕೊಟ್ಟಿರುವುದಕ್ಕೆ ನಾನು ಸಾಷ್ಟಾಂಗ ನಮಸ್ಕರಿಸುತ್ತೇನೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

24 mins ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

55 mins ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

3 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

12 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

12 hours ago