ರಾಜ್ಯ

ಜನಕಲ್ಯಾಣ ಸಮಾವೇಶ: 2028ಕ್ಕೆ ಕಾಂಗ್ರೆಸ್‌ ಸರ್ಕಾರ ಅಧಿಕಾರ ಬರುವುದು ಖಚಿತ-ಡಿಸಿಎಂ ಡಿಕೆಶಿ

ಹಾಸನ: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ನಿಲ್ಲುವುದಿಲ್ಲ, ರಾಜ್ಯದಲ್ಲಿ ಮತ್ತೊಮ್ಮೆ 2028ಕ್ಕೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಜಿಲ್ಲೆಯ ಎಸ್‌.ಎಂ.ಕೃಷ್ಣನಗರದಲ್ಲಿ ಇಂದು(ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕನಕಪುರದ ಬಂಡೆ ಡಿ.ಕೆ.ಶಿವಕುಮಾರ್‌ ಸಾಯುವವರೆಗೂ ಸಿಎಂ ಸಿದ್ದರಾಮಯ್ಯರ ಜೊತೆಗೆ ಇರುತ್ತದೆ. ನಾವು ಎಲ್ಲಿ ಕೆಲಸ ಮಾಡುತ್ತಿವೋ ಅಲ್ಲಿ ನಾವು ಪ್ರಾಮಾಣಿಕವಾಗಿರುತ್ತೇವೆ ಇದು ನಮ್ಮ ಇತಿಹಾಸ. ಕಾಂಗ್ರೆಸ್‌ ಶಕ್ತಿ, ಇಡೀ ದೇಶದ ಶಕ್ತಿಯಾಗಿದೆ. ಹೀಗಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಸಮುದಾಯಗಳು ಅಧಿಕಾರಕ್ಕೆ ಬಂದಂತೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತವೆ. 2028ಕ್ಕೆ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ. ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ಟೀಕೆಗಳಿಗೆ ಉಪಚುನಾವಣೆಯಲ್ಲಿ ರಾಜ್ಯದ ಜನತೆ ಉತ್ತರ ನೀಡಿದ್ದು, ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಮೂಲಕ ಬೆರೆ ಏರಿಕೆಯಿಂದ ತತ್ತರಿಸಿದ್ದ ಸಮಾಜಕ್ಕೆ ಶಕ್ತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇಡೀ ಜಿಲ್ಲೆಗೆ ಹಾಗೂ ನೊಂದ ತಾಯಂದಿರಿಗೆ ನ್ಯಾಯವನ್ನು ಕೊಡಿಸುವ ಸಲುವಾಗಿ ಹಾಸನದಲ್ಲಿ 25 ವರ್ಷದ ನಂತರ ಲೋಕಸಭೆಯ ಸಂಸದ ಸ್ಥಾನಕ್ಕೆ ಕಾಂಗ್ರೆಸ್‌ನ ಶ್ರೇಯಸ್‌ ಪಟೇಲ್‌ರನ್ನು ಸಂಸದರಾಗಿ ಆರಿಸುವ ಮೂಲಕ ನ್ಯಾಯ ದೊರಕಿಸಿಕೊಟ್ಟಿರುವುದಕ್ಕೆ ನಾನು ಸಾಷ್ಟಾಂಗ ನಮಸ್ಕರಿಸುತ್ತೇನೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago