ರಾಜ್ಯ

ಶೇ.60ರಷ್ಟು ಕನ್ನಡ ಬೋರ್ಡ್ ಕಡ್ಡಾಯಕ್ಕೆ ಫೆ.28ರ ವರೆಗೆ ಡೆಡ್​​ಲೈನ್

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಅಂಗಡಿಗಳಲ್ಲಿಯೂ ಶೇ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯವಾಗಿರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರವೇ ಸಂಘಟನೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇಂದು (ಗುರುವಾರ) ಸಭೆ ಮಾಡಿದೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಮಫಲಕಗಳು ಶೇಕಡಾ 50ರಷ್ಟು ಕನ್ನಡದಲ್ಲೇ ಇರಬೇಕು. ಬಾಕಿ ಅರ್ಧದಷ್ಟು ಬೇರೆ ಭಾಷೆಯಲ್ಲಿಯರಬೇಕು ಎಂಬ ಬಗ್ಗೆ 2018ರಲ್ಲಿಯೇ ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಇದೀಗ ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್​ ಇರಬೇಕೆಂದು ಅದಕ್ಕೆ ತಿದ್ದುಪಡಿ ತರುವುದಕ್ಕೆ ಇಂದಿನ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಇದರನ್ವಯ ಎಲ್ಲಾ ಅಂಗಡಿಗಳು 2024ರ ಫೆ.28ರೊಳಗೆ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು. ನಿಯಮ ಜಾರಿಗೆ ವಿಳಂಬ ಆಗಿರುವುದು ನಿಜ. ಇನ್ನು ಮುಂದೆ ವಿಳಂಬ ಮಾಡದಂತೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

ಕರವೇ ಕಾರ್ಯಕರ್ತರ ಹೋರಾಟಕ್ಕೆ ಸಂಬಂಧಿಸಿದಂತೆ, ನ್ಯಾಯಯುತ ಹೊರಟಕ್ಕೆ ನಮ್ಮ ಸರ್ಕಾರದ ವಿರೋಧವಿಲ್ಲ. ಯಾರೇ ಆದರೂ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಶಾಮತಿಯುತವಾಗಿ ಹೋರಾಟ ಮಾಡಬೇಕು. ಯಾರು ಕೂಡಾ ಕಾನೂನು ಕೈಗೆತ್ತಿಕೊಳ್ಳಬಾರದು. ಕಾನೂನಿ ವಿರುದ್ಧ ಹೋರಾಟ ಮಾಡಿದರೇ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆಯಾಗಿದ್ದು, ಇದರಲ್ಲಿ ಯಾವುದೇ ರಾಜಿಯಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕನ್ನಡ ಸಂಬಂಧ ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಇದು ಕರ್ನಾಟಕ ರಾಜ್ಯಕ್ಕೆ ಅನ್ವಯವಾಗಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಇನ್ನು ನಾಪಫಲಕ ಬಗ್ಗೆ ಕರವೇ ಪ್ರತಿಭಟನೆ ಬಗ್ಗೆ ಸಿಎಂ, ಕರವೇ ಯವರು ಮನವಿ ಕೊಟ್ಟಿದ್ರೆ ಪೊಲೀಸರು ಉತ್ತರಿಸುತ್ತಿದ್ದರು. ನನಗೂ ಬಂದಿಲ್ಲ, ಗೃಹ ಸಚಿವರಿಗೂ ಮನವಿ ಬಂದಿಲ್ಲ. ಯಾವುದೇ ಮನವಿ ಕೊಡದೇ ಪ್ರತಿಭಟನೆ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

46 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago