ರಾಜ್ಯ

ಶೇ.60ರಷ್ಟು ಕನ್ನಡ ಬೋರ್ಡ್ ಕಡ್ಡಾಯಕ್ಕೆ ಫೆ.28ರ ವರೆಗೆ ಡೆಡ್​​ಲೈನ್

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಅಂಗಡಿಗಳಲ್ಲಿಯೂ ಶೇ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯವಾಗಿರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರವೇ ಸಂಘಟನೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇಂದು (ಗುರುವಾರ) ಸಭೆ ಮಾಡಿದೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಮಫಲಕಗಳು ಶೇಕಡಾ 50ರಷ್ಟು ಕನ್ನಡದಲ್ಲೇ ಇರಬೇಕು. ಬಾಕಿ ಅರ್ಧದಷ್ಟು ಬೇರೆ ಭಾಷೆಯಲ್ಲಿಯರಬೇಕು ಎಂಬ ಬಗ್ಗೆ 2018ರಲ್ಲಿಯೇ ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಇದೀಗ ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್​ ಇರಬೇಕೆಂದು ಅದಕ್ಕೆ ತಿದ್ದುಪಡಿ ತರುವುದಕ್ಕೆ ಇಂದಿನ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಇದರನ್ವಯ ಎಲ್ಲಾ ಅಂಗಡಿಗಳು 2024ರ ಫೆ.28ರೊಳಗೆ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು. ನಿಯಮ ಜಾರಿಗೆ ವಿಳಂಬ ಆಗಿರುವುದು ನಿಜ. ಇನ್ನು ಮುಂದೆ ವಿಳಂಬ ಮಾಡದಂತೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

ಕರವೇ ಕಾರ್ಯಕರ್ತರ ಹೋರಾಟಕ್ಕೆ ಸಂಬಂಧಿಸಿದಂತೆ, ನ್ಯಾಯಯುತ ಹೊರಟಕ್ಕೆ ನಮ್ಮ ಸರ್ಕಾರದ ವಿರೋಧವಿಲ್ಲ. ಯಾರೇ ಆದರೂ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಶಾಮತಿಯುತವಾಗಿ ಹೋರಾಟ ಮಾಡಬೇಕು. ಯಾರು ಕೂಡಾ ಕಾನೂನು ಕೈಗೆತ್ತಿಕೊಳ್ಳಬಾರದು. ಕಾನೂನಿ ವಿರುದ್ಧ ಹೋರಾಟ ಮಾಡಿದರೇ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆಯಾಗಿದ್ದು, ಇದರಲ್ಲಿ ಯಾವುದೇ ರಾಜಿಯಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕನ್ನಡ ಸಂಬಂಧ ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಇದು ಕರ್ನಾಟಕ ರಾಜ್ಯಕ್ಕೆ ಅನ್ವಯವಾಗಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಇನ್ನು ನಾಪಫಲಕ ಬಗ್ಗೆ ಕರವೇ ಪ್ರತಿಭಟನೆ ಬಗ್ಗೆ ಸಿಎಂ, ಕರವೇ ಯವರು ಮನವಿ ಕೊಟ್ಟಿದ್ರೆ ಪೊಲೀಸರು ಉತ್ತರಿಸುತ್ತಿದ್ದರು. ನನಗೂ ಬಂದಿಲ್ಲ, ಗೃಹ ಸಚಿವರಿಗೂ ಮನವಿ ಬಂದಿಲ್ಲ. ಯಾವುದೇ ಮನವಿ ಕೊಡದೇ ಪ್ರತಿಭಟನೆ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.

andolanait

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

6 hours ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

7 hours ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

8 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

9 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

10 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

10 hours ago