ರಾಜ್ಯ

ಶೇ.60ರಷ್ಟು ಕನ್ನಡ ಬೋರ್ಡ್ ಕಡ್ಡಾಯಕ್ಕೆ ಫೆ.28ರ ವರೆಗೆ ಡೆಡ್​​ಲೈನ್

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಅಂಗಡಿಗಳಲ್ಲಿಯೂ ಶೇ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯವಾಗಿರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರವೇ ಸಂಘಟನೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇಂದು (ಗುರುವಾರ) ಸಭೆ ಮಾಡಿದೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಮಫಲಕಗಳು ಶೇಕಡಾ 50ರಷ್ಟು ಕನ್ನಡದಲ್ಲೇ ಇರಬೇಕು. ಬಾಕಿ ಅರ್ಧದಷ್ಟು ಬೇರೆ ಭಾಷೆಯಲ್ಲಿಯರಬೇಕು ಎಂಬ ಬಗ್ಗೆ 2018ರಲ್ಲಿಯೇ ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಇದೀಗ ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್​ ಇರಬೇಕೆಂದು ಅದಕ್ಕೆ ತಿದ್ದುಪಡಿ ತರುವುದಕ್ಕೆ ಇಂದಿನ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಇದರನ್ವಯ ಎಲ್ಲಾ ಅಂಗಡಿಗಳು 2024ರ ಫೆ.28ರೊಳಗೆ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು. ನಿಯಮ ಜಾರಿಗೆ ವಿಳಂಬ ಆಗಿರುವುದು ನಿಜ. ಇನ್ನು ಮುಂದೆ ವಿಳಂಬ ಮಾಡದಂತೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

ಕರವೇ ಕಾರ್ಯಕರ್ತರ ಹೋರಾಟಕ್ಕೆ ಸಂಬಂಧಿಸಿದಂತೆ, ನ್ಯಾಯಯುತ ಹೊರಟಕ್ಕೆ ನಮ್ಮ ಸರ್ಕಾರದ ವಿರೋಧವಿಲ್ಲ. ಯಾರೇ ಆದರೂ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಶಾಮತಿಯುತವಾಗಿ ಹೋರಾಟ ಮಾಡಬೇಕು. ಯಾರು ಕೂಡಾ ಕಾನೂನು ಕೈಗೆತ್ತಿಕೊಳ್ಳಬಾರದು. ಕಾನೂನಿ ವಿರುದ್ಧ ಹೋರಾಟ ಮಾಡಿದರೇ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆಯಾಗಿದ್ದು, ಇದರಲ್ಲಿ ಯಾವುದೇ ರಾಜಿಯಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕನ್ನಡ ಸಂಬಂಧ ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಇದು ಕರ್ನಾಟಕ ರಾಜ್ಯಕ್ಕೆ ಅನ್ವಯವಾಗಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಇನ್ನು ನಾಪಫಲಕ ಬಗ್ಗೆ ಕರವೇ ಪ್ರತಿಭಟನೆ ಬಗ್ಗೆ ಸಿಎಂ, ಕರವೇ ಯವರು ಮನವಿ ಕೊಟ್ಟಿದ್ರೆ ಪೊಲೀಸರು ಉತ್ತರಿಸುತ್ತಿದ್ದರು. ನನಗೂ ಬಂದಿಲ್ಲ, ಗೃಹ ಸಚಿವರಿಗೂ ಮನವಿ ಬಂದಿಲ್ಲ. ಯಾವುದೇ ಮನವಿ ಕೊಡದೇ ಪ್ರತಿಭಟನೆ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.

andolanait

Recent Posts

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

6 mins ago

ಶಕ್ತಿ ಯೋಜನೆ ಟಿಕೆಟ್ ದುರ್ಬಳಕೆ : ಬಿಎಂಟಿಸಿ ಐವರು ಕಂಡಕ್ಟರ್‌ ಅಮಾನತು

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…

57 mins ago

ಕೃಷಿ ಪದವಿ ಪಡೆಯಲು ಸುವರ್ಣ ಅವಕಾಶ : 50% ಮೀಸಲು, ಏಪ್ರಿಲ್ 29ಕ್ಕೆ ಪ್ರಾಯೋಗಿಕ ಪರೀಕ್ಷೆ

ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ…

1 hour ago

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…

2 hours ago

ಸಚಿವ ಸಂಪುಟ ಪುನರಾಚನೆಗೆ ಒತ್ತಡ ; ಕಾಂಗ್ರೆಸ್ ಶಾಸಕರು ಇಂದು ದೆಹಲಿಗೆ.

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…

2 hours ago

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

3 hours ago