ರಾಜ್ಯ

ಶೇ.60ರಷ್ಟು ಕನ್ನಡ ಬೋರ್ಡ್ ಕಡ್ಡಾಯಕ್ಕೆ ಫೆ.28ರ ವರೆಗೆ ಡೆಡ್​​ಲೈನ್

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಅಂಗಡಿಗಳಲ್ಲಿಯೂ ಶೇ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯವಾಗಿರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರವೇ ಸಂಘಟನೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇಂದು (ಗುರುವಾರ) ಸಭೆ ಮಾಡಿದೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಮಫಲಕಗಳು ಶೇಕಡಾ 50ರಷ್ಟು ಕನ್ನಡದಲ್ಲೇ ಇರಬೇಕು. ಬಾಕಿ ಅರ್ಧದಷ್ಟು ಬೇರೆ ಭಾಷೆಯಲ್ಲಿಯರಬೇಕು ಎಂಬ ಬಗ್ಗೆ 2018ರಲ್ಲಿಯೇ ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಇದೀಗ ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್​ ಇರಬೇಕೆಂದು ಅದಕ್ಕೆ ತಿದ್ದುಪಡಿ ತರುವುದಕ್ಕೆ ಇಂದಿನ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಇದರನ್ವಯ ಎಲ್ಲಾ ಅಂಗಡಿಗಳು 2024ರ ಫೆ.28ರೊಳಗೆ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು. ನಿಯಮ ಜಾರಿಗೆ ವಿಳಂಬ ಆಗಿರುವುದು ನಿಜ. ಇನ್ನು ಮುಂದೆ ವಿಳಂಬ ಮಾಡದಂತೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

ಕರವೇ ಕಾರ್ಯಕರ್ತರ ಹೋರಾಟಕ್ಕೆ ಸಂಬಂಧಿಸಿದಂತೆ, ನ್ಯಾಯಯುತ ಹೊರಟಕ್ಕೆ ನಮ್ಮ ಸರ್ಕಾರದ ವಿರೋಧವಿಲ್ಲ. ಯಾರೇ ಆದರೂ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಶಾಮತಿಯುತವಾಗಿ ಹೋರಾಟ ಮಾಡಬೇಕು. ಯಾರು ಕೂಡಾ ಕಾನೂನು ಕೈಗೆತ್ತಿಕೊಳ್ಳಬಾರದು. ಕಾನೂನಿ ವಿರುದ್ಧ ಹೋರಾಟ ಮಾಡಿದರೇ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆಯಾಗಿದ್ದು, ಇದರಲ್ಲಿ ಯಾವುದೇ ರಾಜಿಯಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕನ್ನಡ ಸಂಬಂಧ ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಇದು ಕರ್ನಾಟಕ ರಾಜ್ಯಕ್ಕೆ ಅನ್ವಯವಾಗಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಇನ್ನು ನಾಪಫಲಕ ಬಗ್ಗೆ ಕರವೇ ಪ್ರತಿಭಟನೆ ಬಗ್ಗೆ ಸಿಎಂ, ಕರವೇ ಯವರು ಮನವಿ ಕೊಟ್ಟಿದ್ರೆ ಪೊಲೀಸರು ಉತ್ತರಿಸುತ್ತಿದ್ದರು. ನನಗೂ ಬಂದಿಲ್ಲ, ಗೃಹ ಸಚಿವರಿಗೂ ಮನವಿ ಬಂದಿಲ್ಲ. ಯಾವುದೇ ಮನವಿ ಕೊಡದೇ ಪ್ರತಿಭಟನೆ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

7 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

8 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

8 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

8 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

8 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

8 hours ago