ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಅಂಗಡಿಗಳಲ್ಲಿಯೂ ಶೇ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯವಾಗಿರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್ ಚೇಂಜ್ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರವೇ ಸಂಘಟನೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇಂದು (ಗುರುವಾರ) ಸಭೆ ಮಾಡಿದೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಮಫಲಕಗಳು ಶೇಕಡಾ 50ರಷ್ಟು ಕನ್ನಡದಲ್ಲೇ ಇರಬೇಕು. ಬಾಕಿ ಅರ್ಧದಷ್ಟು ಬೇರೆ ಭಾಷೆಯಲ್ಲಿಯರಬೇಕು ಎಂಬ ಬಗ್ಗೆ 2018ರಲ್ಲಿಯೇ ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಇದೀಗ ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್ ಇರಬೇಕೆಂದು ಅದಕ್ಕೆ ತಿದ್ದುಪಡಿ ತರುವುದಕ್ಕೆ ಇಂದಿನ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಇದರನ್ವಯ ಎಲ್ಲಾ ಅಂಗಡಿಗಳು 2024ರ ಫೆ.28ರೊಳಗೆ ಬೋರ್ಡ್ ಚೇಂಜ್ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು. ನಿಯಮ ಜಾರಿಗೆ ವಿಳಂಬ ಆಗಿರುವುದು ನಿಜ. ಇನ್ನು ಮುಂದೆ ವಿಳಂಬ ಮಾಡದಂತೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.
ಕರವೇ ಕಾರ್ಯಕರ್ತರ ಹೋರಾಟಕ್ಕೆ ಸಂಬಂಧಿಸಿದಂತೆ, ನ್ಯಾಯಯುತ ಹೊರಟಕ್ಕೆ ನಮ್ಮ ಸರ್ಕಾರದ ವಿರೋಧವಿಲ್ಲ. ಯಾರೇ ಆದರೂ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಶಾಮತಿಯುತವಾಗಿ ಹೋರಾಟ ಮಾಡಬೇಕು. ಯಾರು ಕೂಡಾ ಕಾನೂನು ಕೈಗೆತ್ತಿಕೊಳ್ಳಬಾರದು. ಕಾನೂನಿ ವಿರುದ್ಧ ಹೋರಾಟ ಮಾಡಿದರೇ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆಯಾಗಿದ್ದು, ಇದರಲ್ಲಿ ಯಾವುದೇ ರಾಜಿಯಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕನ್ನಡ ಸಂಬಂಧ ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಇದು ಕರ್ನಾಟಕ ರಾಜ್ಯಕ್ಕೆ ಅನ್ವಯವಾಗಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಇನ್ನು ನಾಪಫಲಕ ಬಗ್ಗೆ ಕರವೇ ಪ್ರತಿಭಟನೆ ಬಗ್ಗೆ ಸಿಎಂ, ಕರವೇ ಯವರು ಮನವಿ ಕೊಟ್ಟಿದ್ರೆ ಪೊಲೀಸರು ಉತ್ತರಿಸುತ್ತಿದ್ದರು. ನನಗೂ ಬಂದಿಲ್ಲ, ಗೃಹ ಸಚಿವರಿಗೂ ಮನವಿ ಬಂದಿಲ್ಲ. ಯಾವುದೇ ಮನವಿ ಕೊಡದೇ ಪ್ರತಿಭಟನೆ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…