ಕಲಬುರಗಿ: ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ ಮುಂದುವರೆದಿದ್ದು, ಅಫಜಲಪುರ ತಾಲೂಕಿನ ಬಾಣಂತಿಯೊಬ್ಬರು ಕಲಬುರಗಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಫಜಲಪುರ ತಾಲೂಕಿನ ಹವಳಗಾ ಭಾಗ್ಯಶ್ರೀ ಶಿವಾಜಿ (22) ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಭಾಗ್ಯಶ್ರೀ ಅವರನ್ನು ಸೋಮವಾರ ಅಫಜಲಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಾಲಿಸಲಾಯಿತು. ಮಂಗಳವಾರ ಬೆಳಿಗ್ಗೆ ಗಂಡು ಮಗುವಿಗೆ ಜನ್ಮ ನೀಡಿದರು. ಆ ನಂತರ
ರಕ್ತದೊತ್ತಡ (blood pressure) ಕಡಿಮೆಯಾಯಿತು. ತಕ್ಷಣವೇ ಜಿಲ್ಲಾಸ್ಪತ್ರೆಗೆ ಸೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಗದೆ ಬಾಣಂತಿ ಸಾವನ್ನಪ್ಪಿದ್ದಾರೆ. ಇದಕ್ಕೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…