ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಸಾವನ್ನಪ್ಪುತ್ತಿವೆ.
ಕಳೆದ ಐದಾರು ದಿನಗಳಿಂದಲೂ ಮಾನ್ವಿ ಪಟ್ಟಣ, ರಬಣಕಲ್ ಸೇರಿದಂತೆ ಹಲವೆಡೆ ಪಕ್ಷಗಳು ಇದ್ದಕ್ಕಿದ್ದಂತೆ ಮರದ ಮೇಲಿಂದ ಬಿದ್ದು, ಸಾವನ್ನಪ್ಪುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯರದಲ್ಲಿ ಆತಂಕ ಮನೆಮಾಡಿದ್ದು, ಇದು ಹಕ್ಕಿ ಜ್ವರ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪಶುವೈದ್ಯಾಧಿಕಾರಿಗಳು ಮರದಿಂದ ಬಿದ್ದ ಪಕ್ಷಿಗಳಿಗೆ ಇಂಜೆಕ್ಷನ್ ನೀಡಿ ರಕ್ಷಣೆ ಮಾಡಿದ್ದಾರೆ. ಮೃತ ಪಕ್ಷಿಯ ಕಳೆಬರವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಒಂದು ವೇಳೆ ವರದಿಯಲ್ಲಿ ಹಕ್ಕಿ ಜ್ವರ ಎಂದು ದೃಢವಾದರೆ, ಕೋಳಿ ಸಾಕಾಣಿಕೆ ಮೇಲೆ ಭಾರೀ ಹೊಡೆತ ಬೀಳಲಿದ್ದು, ಕೋಳಿ ಸಾಕಾಣಿಕೆ ಮಾಡುತ್ತಿರುವ ಮಾಲೀಕರಿಗೆ ಢವ ಢವ ಶುರುವಾಗಿದೆ ಎನ್ನಲಾಗುತ್ತಿದೆ.
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…