ರಾಜ್ಯ

ಆರೋಗ್ಯ ಸಚಿವರ ನಿರ್ಲಕ್ಷ್ಯದಿಂದ ನವಜಾತ ಶಿಶು, ಬಾಣಂತಿಯರ ಸಾವು: ಬಿಜೆಪಿ ಆರೋಪ

ಬೆಂಗಳೂರು: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ಲಕ್ಷ್ಯದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನವಜಾತ ಶಿಶುಗಳು ಹಾಗೂ ಬಾಣಂತಿಯರ ಸಾವು ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ರಾಜ್ಯ ಬಿಜೆಪಿ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ಬಳ್ಳಾರಿ, ದಾವಣಗೆರೆ ಜಿಲ್ಲೆ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ ಹೆಚ್ಚಿದೆ. ಇದರ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ವಹಿಸದ ಕಾರಣ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾವಿನ ಸಂಖ್ಯೆಗಳು ಹೆಚಾಗುತ್ತಿವೆ ಎಂದು ದೂರಿದರು.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಣಿ ಸಾವುಗಳು ಸಂಭವಿಸುತ್ತಿದ್ದರು ಘಟನೆ ಕುರಿತು ವರದಿ ಪಡೆದರೆ ಸಾಲದು, ಸರ್ಕಾರಿ ಆಸ್ಪತ್ರೆಗಳಲ್ಲಿ ಇರುವ ಸಮಸ್ಯೆಗಳನ್ನು ಸರಿಪಡಿಸಿ ಅತ್ಯಾಧುನಿಕ ಸೌಲಭ್ಯ ಓದಗಿಸಿ, ಜನರ ಪ್ರಾಣ ಉಳಿಸುವ ಮುಖಾಂತರ ತಮ್ಮ ಸಾಮಾಜಿಕ ಕಳಕಳಿಯ ಬದ್ದತೆಯನ್ನು ಸಾಬೀತು ಮಾಡಿ. ಹಾಗೆಯೇ ಇಲಾಖೆಗೂ ತಮಗೂ ಸಂಬಂಧವಿಲ್ಲದಂತಿರುವ ಆರೋಗ್ಯ ಸಚಿವರಿಗೆ ಜವಬ್ದಾರಿ, ಕರ್ತವ್ಯದ ಪಾಠಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಚುಚ್ಚಿದೆ.

ಬಳ್ಳಾರಿ ಜಿಲ್ಲಾಸ್ಪತ್ರೆಯ ಐವರ ಬಾಣಂತಿಯರ ಸಾವು, ದಾವಣಗೆರೆ, ಬೆಳಗಾವಿ, ಬೆಂಗಳೂರಿನ ಆಸ್ಪತ್ರೆಯಲ್ಲಿ ಹಸುಗೂಸುಗಳ ಸರಣಿ ಸಾವಾಗಿದ್ದರೂ, ಎಚ್ಚೆತ್ತುಕೊಳ್ಳದ ಕಾಂಗ್ರೆಸ್‌ ಸರ್ಕಾರ ಅಮಾಯಕ ಜನರ ಜೀವನದ ಆರೋಗ್ಯದ ಜೊತೆಯಲ್ಲಿ ಚೆಲ್ಲಾಟ ಆಡುತ್ತಿದೆ ಎಂದು ಕಟುವಾಗಿ ಟೀಕಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

5 mins ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

9 mins ago

‘ಸರ್ಕಾರಿ ಪಿಯು ಕಾಲೇಜುಗಳಿಗೆ ಹೆಚ್ಚುವರಿ ಕೊಠಡಿ ಭಾಗ್ಯ’

ರಾಜ್ಯದ ೩೨ ಶೈಕ್ಷಣಿಕ ಜಿಲ್ಲೆಗಳ ೧೩೫ ಪಿಯು ಕಾಲೇಜುಗಳಲ್ಲಿ ೧೮೫ ಕೊಠಡಿಗಳ ನಿರ್ಮಾಣ ಬಾಲಕರ ೪೬, ಬಾಲಕಿಯರ ೫೦ ಶೌಚಾಲಯ…

14 mins ago

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

8 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

8 hours ago