ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಿರ್ಲಕ್ಷ್ಯದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನವಜಾತ ಶಿಶುಗಳು ಹಾಗೂ ಬಾಣಂತಿಯರ ಸಾವು ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ರಾಜ್ಯ ಬಿಜೆಪಿ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಬಳ್ಳಾರಿ, ದಾವಣಗೆರೆ ಜಿಲ್ಲೆ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನವಜಾತ ಶಿಶುಗಳ ಸಾವಿನ ಸಂಖ್ಯೆ ಹೆಚ್ಚಿದೆ. ಇದರ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ವಹಿಸದ ಕಾರಣ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾವಿನ ಸಂಖ್ಯೆಗಳು ಹೆಚಾಗುತ್ತಿವೆ ಎಂದು ದೂರಿದರು.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಣಿ ಸಾವುಗಳು ಸಂಭವಿಸುತ್ತಿದ್ದರು ಘಟನೆ ಕುರಿತು ವರದಿ ಪಡೆದರೆ ಸಾಲದು, ಸರ್ಕಾರಿ ಆಸ್ಪತ್ರೆಗಳಲ್ಲಿ ಇರುವ ಸಮಸ್ಯೆಗಳನ್ನು ಸರಿಪಡಿಸಿ ಅತ್ಯಾಧುನಿಕ ಸೌಲಭ್ಯ ಓದಗಿಸಿ, ಜನರ ಪ್ರಾಣ ಉಳಿಸುವ ಮುಖಾಂತರ ತಮ್ಮ ಸಾಮಾಜಿಕ ಕಳಕಳಿಯ ಬದ್ದತೆಯನ್ನು ಸಾಬೀತು ಮಾಡಿ. ಹಾಗೆಯೇ ಇಲಾಖೆಗೂ ತಮಗೂ ಸಂಬಂಧವಿಲ್ಲದಂತಿರುವ ಆರೋಗ್ಯ ಸಚಿವರಿಗೆ ಜವಬ್ದಾರಿ, ಕರ್ತವ್ಯದ ಪಾಠಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಚುಚ್ಚಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆಯ ಐವರ ಬಾಣಂತಿಯರ ಸಾವು, ದಾವಣಗೆರೆ, ಬೆಳಗಾವಿ, ಬೆಂಗಳೂರಿನ ಆಸ್ಪತ್ರೆಯಲ್ಲಿ ಹಸುಗೂಸುಗಳ ಸರಣಿ ಸಾವಾಗಿದ್ದರೂ, ಎಚ್ಚೆತ್ತುಕೊಳ್ಳದ ಕಾಂಗ್ರೆಸ್ ಸರ್ಕಾರ ಅಮಾಯಕ ಜನರ ಜೀವನದ ಆರೋಗ್ಯದ ಜೊತೆಯಲ್ಲಿ ಚೆಲ್ಲಾಟ ಆಡುತ್ತಿದೆ ಎಂದು ಕಟುವಾಗಿ ಟೀಕಿಸಿದರು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…