ರಾಜ್ಯ

ರಾಜ್ಯಾದ್ಯಂತ ಮುಂದುವರಿದ ಮಳೆಯ ಆರ್ಭಟ: ಮಹಾಮಳೆಗೆ ಮೃತರ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಪ್ರಮಾಣದ ಧಾರಾಕಾರ ಮಳೆಯಾಗಿದ್ದು, ಮಹಾಮಳೆಗೆ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಇನ್ನೂ ಒಂದು ವಾರ ಮಳೆ ಮುಂದುವರೆಯಲಿದ್ದು, ವರುಣನ ಆರ್ಭಟಕ್ಕೆ ರಾಜಧಾನಿ ಬೆಂಗಳೂರು ಅಕ್ಷರಶಃ ನಲುಗಿ ಹೋಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ದಾವಣಗೆರೆ, ಉಡುಪಿ, ಕಾರ್ಕಳ, ಕುಂದಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕೆರೆ ಕಟ್ಟೆಗಳು ಭರ್ತಿಯಾಗತೊಡಗಿವೆ. ಹೊಲಗದ್ದೆಗಳು ಜಲಾವೃತವಾಗಿವೆ.

ಹಲವೆಡೆ ಮನೆಗಳು ಕುಸಿದು ಬಿದ್ದಿದ್ದು, ಮಾವು, ಹಲಸು, ಹೂ-ಹಣ್ಣು, ತರಕಾರಿ ಬೆಳೆಗಳು ನಾಶವಾಗಿವೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿದಿದ್ದು, ಕೆರೆಕಟ್ಟೆಗಳು ಭರ್ತಿಯಾಗಿ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹೊಲಗದ್ದೆಗಳಿಗೂ ನೀರು ನುಗ್ಗಿದ ಪರಿಣಾಮ ಹಣ್ಣು, ತರಕಾರಿ, ಬೆಳೆ ನಾಶವಾಗಿ ರೈತರಿಗೆ ಅಪಾರ ಹಾನಿಯುಂಟಾಗಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವ್ಯಾಪಕ ಪ್ರಮಾಣದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಮಲೆನಾಡು ಹಾಗೂ ಅದಕ್ಕೆ ಹೊಂದಿಕೊಂಡಂತಿರುವ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಇನ್ನು ಮೂರ್ನಾಲ್ಕು ದಿನಗಳಲ್ಲಿ ನೈರುತ್ಯ ಮುಂಗಾರು ಪ್ರಾರಂಭವಾಗಲಿದ್ದು, ಈಗಾಗಲೇ ಮಳೆಗಾಲದ ವಾತಾವರಣ ಸೃಷ್ಟಿಯಾಗಿದೆ. ಕಡು ಬೇಸಿಗೆಯಲ್ಲೇ ನಿರಂತರ ಮಳೆಯಿಂದಾಗಿ ಗರಿಷ್ಠ ತಾಪಮಾನದಲ್ಲಿ ಗಣನೀಯ ಕುಸಿತವಾಗಿ ವಾತಾವರಣ ತಂಪಾಗಿದ್ದು, ಚಳಿಯ ಅನುಭವವಾಗುತ್ತಿದೆ.

ದ.ಕನ್ನಡ, ಉಡುಪಿ, ಕರಾವಳಿ ಭಾಗದ ವಿವಿಧೆಡೆ ಮಳೆ ಸುರಿಯುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪ್ರವಾಸಿಗರು, ಸಾರ್ವಜನಿಕರು ಕೂಡ ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಕರಾವಳಿಗೆ ಹೊಂದಿಕೊಂಡಂತೆ ಅರಬ್ಬೀ ಸಮುದ್ರದಲ್ಲಿ ಮೇ.22ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

5 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

6 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

7 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

7 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

7 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

9 hours ago