ರಾಜ್ಯ

ಸಾಲ ವಸೂಲಿ | ಕಿರುಕುಳ ಕಂಡರೆ ಕ್ರಿಮಿನಲ್‌ ಕೇಸ್‌ ದಾಖಲಿಸಲು ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ವಸೂಲಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ದೂರು ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್‌ಬಿಐ ನಿಯಮವಿದೆ.  ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಹೀಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ ಸಾಲ ವಸೂಲಾತಿಗೆ ಆರ್‌ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ತಡೆಯಲು ಸೂಚಿಸಲಾಗಿದೆ ಎಂದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರ ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ, ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್‌ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago