ರಾಜ್ಯ

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಹೆಸರಿನಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧರಿಸಿದ್ದು, ಈ ತೀರ್ಮಾನವನ್ನು ಪರಿಸರ ಪ್ರೇಮಿಗಳು ತೀವ್ರವಾಗಿ ಆಕ್ಷೇಪಿಸಿದ್ದಾರೆ.

ಭದ್ರಾ ವೈಲ್ಡ್‌ಲೈಫ್ ಕನ್ಸರ್ವೇಶನ್ ಟ್ರಸ್ಟ್‌ನ ಮುಖ್ಯಸ್ಥ ಡಿ.ವಿ.ಗಿರೀಶ್, ರಾಜ್ಯ ವನ್ಯಜೀವಿ ಮಂಡಳಿ ಮಾಜಿ ಸದಸ್ಯ ಸ.ಗಿರಿಜಾಶಂಕರ ಹಾಗೂ ವೈಲ್ಡ್ ಕ್ಯಾಟ್-ಸಿ., ಮುಖ್ಯಸ್ಥ ಹಾಗೂ ಮಾಜಿ ಗೌರವ ವನ್ಯಜೀವಿ ಪರಿಪಾಲಕ ಶ್ರೀದೇವ್ ಹುಲಿಕೆರೆ ಹೆಲಿಟೂರಿಸಂಗೆ ತೀವ್ರ ವಿರೋಧ ವ್ಯಕ್ತಪಡಿಸಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ೨೦೨೪ರಲ್ಲಿ ಈ ಯೋಜನೆ ಕಾರ್ಯಗತಗೊಳ್ಳುವ ಸಂಭವವಿದ್ದಾಗ ತಾವು ವಿರೋಽಸಿರುವುದನ್ನು ನೆನಪಿಸಿದ್ದಾರೆ.

ಇದನ್ನು ಓದಿ: ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಮಾಹಿತಿ ಪ್ರಕಾರ ಡಿಸೆಂಬರ್ ೧೩ ರಿಂದ ೧೯ರವರೆಗೆ ಚಿಕ್ಕಮಗಳೂರು ತಾಲ್ಲೂಕಿನ ಗಿರಿಭಾಗದ ವೀಕ್ಷಣೆ, ಡಿಸೆಂಬರ್ ೨೦ ರಿಂದ ೨೨ ರವರೆಗೆ ಮೂಡಿಗೆರೆ, ಡಿ.೨೩ ರಂದು ಮೂಡಿಗೆರೆ ತಾಲ್ಲೂಕಿನ ಸುಂಕಸಾಲೆ, ಡಿ.೨೪ ಮತ್ತು ೨೫ ರಂದು ಕಳಸ ಹಾಗೂ ಡಿ.೨೬ ರಿಂದ ಜನವರಿ ೬ರವರೆಗೆ ಮತ್ತೆ ಗಿರಿಭಾಗ – ಹೀಗೆ ಹೆಲಿಟೂರಿಸಂಗೆ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಈ ಎಲ್ಲ ಸ್ಥಳಗಳು ಪರಿಸರ ಸೂಕ್ಷ ವಾಗಿದ್ದು, ಇಲ್ಲಿ ಈ ರೀತಿ ‘ಜಾಯ್‌ರೈಡ್ ಮಾಡುವುದರಿಂದ ಜನರಿಗೇನೋ ಮನರಂಜನೆ ಸಿಗಬಹುದು; ಕೆಲವು ಖಾಸಗಿ ಕಂಪನಿಗಳಿಗೆ ಲಾಭವಾಗಬಹುದು. ಆದರೆ ಈ ಅವೈಜ್ಞಾನಿಕ ಕ್ರಮದಿಂದ ವನ್ಯಪ್ರಾಣಿಗಳ ಸ್ವೇಚ್ಛೆಗೆ ಸಂಚಕಾರವಾಗದೇ. ಈಗಾಗಲೇ ವನ್ಯಜೀವಿ-ಮಾನವ ಸಂಘರ್ಷದಿಂದ ಸಾಕಷ್ಟು ತತ್ತರಿಸಿದ್ದೇವೆ. ಇಷ್ಟಾಗಿಯೂ ಬುದ್ಧಿ ಕಲಿಯದಿದ್ದರೆ ಇದಕ್ಕೇನನ್ನಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರವಾಸೋದ್ಯಮವನ್ನು ಉತ್ತೇಜಿಸುವ ಭರದಲ್ಲಿ ಮುಳ್ಳಯ್ಯನಗಿರಿ ಹಾಗೂ ಅದಕ್ಕೆ ಹೊಂದಿಕೊಂಡಿರುವ ಗಿರಿಶ್ರೇಣಿಗಳ ಸೂಕ್ಷ ತೆ ಅರ್ಥ ಮಾಡಿಕೊಳ್ಳುವಲ್ಲಿ ನಮ್ಮ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲೇ ಅತೀ ಎತ್ತರದ ಮುಳ್ಳಯ್ಯನಗಿರಿ ಪಶ್ಚಿಮಘಟ್ಟದ ವಿಶೇಷತೆಯಾದ ಶೋಲಾ ಕಾಡುಗಳನ್ನು ತನ್ನ ಇಳಿಜಾರಿನಲ್ಲಿ ಹೊಂದಿದ್ದು, ಕಾಡುಗಳ ಪಕ್ಕದಲ್ಲೇ ಅತ್ಯಂತ ಎತ್ತರದ ಹುಲ್ಲು ಬೆಳೆಯುವ ಪ್ರದೇಶವೂ ಆಗಿದೆ. ಬಹು ಮುಖ್ಯವಾಗಿ ಹೊನ್ನಮ್ಮನಹಳ್ಳ, ಹೆಬ್ಬೇಹಳ್ಳ, ತಡಬೇಹಳ್ಳ, ವಾಟೇಹಳ್ಳ ನೀರಿನ ಮೂಲವೂ ಆಗಿದ್ದು, ಈ ಹಳ್ಳಗಳ ನೀರು ಭದ್ರಾ ನದಿಯ ಉಪನದಿಯಾದ ಸೋಮವಾಹಿನಿಯನ್ನು ಸೇರುತ್ತ್ತಿದೆ. ಇಲ್ಲಿ ವೇದಾ ನದಿ ಹುಟ್ಟುತ್ತದಲ್ಲದೆ, ಮದಗದಕೆರೆ ಮತ್ತು ಅಯ್ಯನಕೆರೆಗೂ ನೀರುಣಿಸುವ ಜಲಮೂಲ ಹೊಂದಿದೆ. ಹಾಗೆಯೇ ಮುಳ್ಳಯ್ಯನಗಿರಿ ಅದರ ತಗ್ಗಿನ ಅನೇಕ ಗ್ರಾಮಗಳಿಗೆ ನೀರುಣಿಸುತ್ತದೆ ಎಂದಿದ್ದಾರೆ.

ಮೂಡಿಗೆರೆ ಹಾಗೂ ಸುಂಕಸಾಲೆ ಭಾಗದಲ್ಲಿ ಮೀಸಲು ಅರಣ್ಯ ಪ್ರದೇಶಗಳಿದ್ದು, ಅಲ್ಲೂ ಕೂಡ ಹೆಲಿಟೂರಿಸಂನಿಂದ ವನ್ಯಜೀವಿಗಳಿಗೆ ಸಮಸ್ಯೆಯಾಗಲಿದೆ. ಜಿಲ್ಲಾಡಳಿತ ಹೆಲಿ ಟೂರಿಸಂ ಕೈಬಿಟ್ಟು ಜಿಲ್ಲೆಯ ಸೂಕ್ಷ ಪ್ರದೇಶಗಳ ಪ್ರಾಮುಖ್ಯತೆ ಅರಿತು ರಕ್ಷಿಸಲು ಮುಂದಾಗಬೇಕು. ಇಲ್ಲಿ ಹುಟ್ಟಿ ಹರಿಯುವ ಜಲಮೂಲಗಳ ಮಾಲಿನ್ಯ ತಡೆಯಲು ಮುಂದಾಗಬೇಕೆಂದು ಅವರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

9 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

9 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

9 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

9 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

9 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

9 hours ago