ರಾಜ್ಯ

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಹೆಸರಿನಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧರಿಸಿದ್ದು, ಈ ತೀರ್ಮಾನವನ್ನು ಪರಿಸರ ಪ್ರೇಮಿಗಳು ತೀವ್ರವಾಗಿ ಆಕ್ಷೇಪಿಸಿದ್ದಾರೆ.

ಭದ್ರಾ ವೈಲ್ಡ್‌ಲೈಫ್ ಕನ್ಸರ್ವೇಶನ್ ಟ್ರಸ್ಟ್‌ನ ಮುಖ್ಯಸ್ಥ ಡಿ.ವಿ.ಗಿರೀಶ್, ರಾಜ್ಯ ವನ್ಯಜೀವಿ ಮಂಡಳಿ ಮಾಜಿ ಸದಸ್ಯ ಸ.ಗಿರಿಜಾಶಂಕರ ಹಾಗೂ ವೈಲ್ಡ್ ಕ್ಯಾಟ್-ಸಿ., ಮುಖ್ಯಸ್ಥ ಹಾಗೂ ಮಾಜಿ ಗೌರವ ವನ್ಯಜೀವಿ ಪರಿಪಾಲಕ ಶ್ರೀದೇವ್ ಹುಲಿಕೆರೆ ಹೆಲಿಟೂರಿಸಂಗೆ ತೀವ್ರ ವಿರೋಧ ವ್ಯಕ್ತಪಡಿಸಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ೨೦೨೪ರಲ್ಲಿ ಈ ಯೋಜನೆ ಕಾರ್ಯಗತಗೊಳ್ಳುವ ಸಂಭವವಿದ್ದಾಗ ತಾವು ವಿರೋಽಸಿರುವುದನ್ನು ನೆನಪಿಸಿದ್ದಾರೆ.

ಇದನ್ನು ಓದಿ: ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಮಾಹಿತಿ ಪ್ರಕಾರ ಡಿಸೆಂಬರ್ ೧೩ ರಿಂದ ೧೯ರವರೆಗೆ ಚಿಕ್ಕಮಗಳೂರು ತಾಲ್ಲೂಕಿನ ಗಿರಿಭಾಗದ ವೀಕ್ಷಣೆ, ಡಿಸೆಂಬರ್ ೨೦ ರಿಂದ ೨೨ ರವರೆಗೆ ಮೂಡಿಗೆರೆ, ಡಿ.೨೩ ರಂದು ಮೂಡಿಗೆರೆ ತಾಲ್ಲೂಕಿನ ಸುಂಕಸಾಲೆ, ಡಿ.೨೪ ಮತ್ತು ೨೫ ರಂದು ಕಳಸ ಹಾಗೂ ಡಿ.೨೬ ರಿಂದ ಜನವರಿ ೬ರವರೆಗೆ ಮತ್ತೆ ಗಿರಿಭಾಗ – ಹೀಗೆ ಹೆಲಿಟೂರಿಸಂಗೆ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಈ ಎಲ್ಲ ಸ್ಥಳಗಳು ಪರಿಸರ ಸೂಕ್ಷ ವಾಗಿದ್ದು, ಇಲ್ಲಿ ಈ ರೀತಿ ‘ಜಾಯ್‌ರೈಡ್ ಮಾಡುವುದರಿಂದ ಜನರಿಗೇನೋ ಮನರಂಜನೆ ಸಿಗಬಹುದು; ಕೆಲವು ಖಾಸಗಿ ಕಂಪನಿಗಳಿಗೆ ಲಾಭವಾಗಬಹುದು. ಆದರೆ ಈ ಅವೈಜ್ಞಾನಿಕ ಕ್ರಮದಿಂದ ವನ್ಯಪ್ರಾಣಿಗಳ ಸ್ವೇಚ್ಛೆಗೆ ಸಂಚಕಾರವಾಗದೇ. ಈಗಾಗಲೇ ವನ್ಯಜೀವಿ-ಮಾನವ ಸಂಘರ್ಷದಿಂದ ಸಾಕಷ್ಟು ತತ್ತರಿಸಿದ್ದೇವೆ. ಇಷ್ಟಾಗಿಯೂ ಬುದ್ಧಿ ಕಲಿಯದಿದ್ದರೆ ಇದಕ್ಕೇನನ್ನಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರವಾಸೋದ್ಯಮವನ್ನು ಉತ್ತೇಜಿಸುವ ಭರದಲ್ಲಿ ಮುಳ್ಳಯ್ಯನಗಿರಿ ಹಾಗೂ ಅದಕ್ಕೆ ಹೊಂದಿಕೊಂಡಿರುವ ಗಿರಿಶ್ರೇಣಿಗಳ ಸೂಕ್ಷ ತೆ ಅರ್ಥ ಮಾಡಿಕೊಳ್ಳುವಲ್ಲಿ ನಮ್ಮ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲೇ ಅತೀ ಎತ್ತರದ ಮುಳ್ಳಯ್ಯನಗಿರಿ ಪಶ್ಚಿಮಘಟ್ಟದ ವಿಶೇಷತೆಯಾದ ಶೋಲಾ ಕಾಡುಗಳನ್ನು ತನ್ನ ಇಳಿಜಾರಿನಲ್ಲಿ ಹೊಂದಿದ್ದು, ಕಾಡುಗಳ ಪಕ್ಕದಲ್ಲೇ ಅತ್ಯಂತ ಎತ್ತರದ ಹುಲ್ಲು ಬೆಳೆಯುವ ಪ್ರದೇಶವೂ ಆಗಿದೆ. ಬಹು ಮುಖ್ಯವಾಗಿ ಹೊನ್ನಮ್ಮನಹಳ್ಳ, ಹೆಬ್ಬೇಹಳ್ಳ, ತಡಬೇಹಳ್ಳ, ವಾಟೇಹಳ್ಳ ನೀರಿನ ಮೂಲವೂ ಆಗಿದ್ದು, ಈ ಹಳ್ಳಗಳ ನೀರು ಭದ್ರಾ ನದಿಯ ಉಪನದಿಯಾದ ಸೋಮವಾಹಿನಿಯನ್ನು ಸೇರುತ್ತ್ತಿದೆ. ಇಲ್ಲಿ ವೇದಾ ನದಿ ಹುಟ್ಟುತ್ತದಲ್ಲದೆ, ಮದಗದಕೆರೆ ಮತ್ತು ಅಯ್ಯನಕೆರೆಗೂ ನೀರುಣಿಸುವ ಜಲಮೂಲ ಹೊಂದಿದೆ. ಹಾಗೆಯೇ ಮುಳ್ಳಯ್ಯನಗಿರಿ ಅದರ ತಗ್ಗಿನ ಅನೇಕ ಗ್ರಾಮಗಳಿಗೆ ನೀರುಣಿಸುತ್ತದೆ ಎಂದಿದ್ದಾರೆ.

ಮೂಡಿಗೆರೆ ಹಾಗೂ ಸುಂಕಸಾಲೆ ಭಾಗದಲ್ಲಿ ಮೀಸಲು ಅರಣ್ಯ ಪ್ರದೇಶಗಳಿದ್ದು, ಅಲ್ಲೂ ಕೂಡ ಹೆಲಿಟೂರಿಸಂನಿಂದ ವನ್ಯಜೀವಿಗಳಿಗೆ ಸಮಸ್ಯೆಯಾಗಲಿದೆ. ಜಿಲ್ಲಾಡಳಿತ ಹೆಲಿ ಟೂರಿಸಂ ಕೈಬಿಟ್ಟು ಜಿಲ್ಲೆಯ ಸೂಕ್ಷ ಪ್ರದೇಶಗಳ ಪ್ರಾಮುಖ್ಯತೆ ಅರಿತು ರಕ್ಷಿಸಲು ಮುಂದಾಗಬೇಕು. ಇಲ್ಲಿ ಹುಟ್ಟಿ ಹರಿಯುವ ಜಲಮೂಲಗಳ ಮಾಲಿನ್ಯ ತಡೆಯಲು ಮುಂದಾಗಬೇಕೆಂದು ಅವರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 hour ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago