ಬೆಂಗಳೂರು : ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ.
ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು ಕೂಡ ಕಂಬಳ ಕ್ರೀಡೆಗಳಿಗೂ ಸಿಗಲಿವೆ. ಕಂಬಳಕ್ಕೆ ರಾಜ್ಯ ಕ್ರೀಡೆಯ ಮಾನ್ಯತೆ ಅಂತಿಮ ಹಂತದಲ್ಲಿದ್ದು, ಕಂಬಳ ಅಸೋಸಿಯೇಷನ್ ನೇಮಕ ಪಟ್ಟಿಯನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ.
ಸಮಿತಿಯ ಅಧ್ಯಕ್ಷರೇ ಕಂಬಳ ಅಸೋಸಿಯೇಷನ್ ಗೆ ಅಧ್ಯಕ್ಷರಾಗಿದ್ದಾರೆ. ಕಂಬಳ ಕೋಣದ ಮಾಲೀಕರು, ಓಟಗಾರರು ಇತರರಿಗೆ, ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಧನ, ವಿಶೇಷ ಅನುದಾನ ಸೌಲಭ್ಯ ಸಿಗಲಿವೆ. ಈ ಬಗ್ಗೆ ಬೈಲಾ ಸಿದ್ದಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…