kh muniyappa
ಬೆಂಗಳೂರು: ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ದಾರರಿದ್ದು, ಅವುಗಳನ್ನು ಪರಿಷ್ಕರಣೆ ಮಾಡಲಾಗುವುದು ಜೊತೆಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಮುಂದಿನ ತಿಂಗಳಿನಿಂದ ವೆಬ್ಸೈಟ್ ಮುಕ್ತವಾಗಿಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಚಿಕಿತ್ಸೆಯ ತುರ್ತು ಸಂದರ್ಭಕ್ಕೆ ಅನುಕೂಲವಾಗಲು ಪಡಿತರ ಕಾರ್ಡ್ ನೀಡುವ ಸಲುವಾಗಿ ಪ್ರತ್ಯೇಕ ಪೋರ್ಟಲ್ ಆರಂಭಿಸಲಾಗುತ್ತಿದೆ. ಇನ್ನು ಮುಂದೆ 24 ಗಂಟೆಯೊಳಗಾಗಿ ವೈದ್ಯಕೀಯ ಚಿಕಿತ್ಸೆಗೆ ಪಡಿತರ ಕಾರ್ಡ್ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ 25 ಲಕ್ಷ ಎಪಿಎಲ್ ಕಾರ್ಡ್ದಾರರಿದ್ದು, 1 ಲಕ್ಷ ಮಂದಿ ಅಕ್ಕಿ ತೆಗೆದುಕೊಳ್ಳುತ್ತಿರಲಿಲ್ಲ. ಅದಕ್ಕಾಗಿ ಎಪಿಎಲ್ ಕಾರ್ಡ್ಗೆ ಅಕ್ಕಿ ನೀಡುವುದನ್ನು ನಿಲ್ಲಿಸಲಾಗಿದೆ ಎಂದರು.
ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ. ಬದಲಾಗಿ ಅನರ್ಹರನ್ನು ಎಪಿಎಲ್ ವ್ಯಾಪ್ತಿಗೆ ತರುತ್ತೇವೆ. ಒಂದು ವೇಳೆ ಅರ್ಹರ ಕಾರ್ಡ್ಗಳು ರದ್ದುಗೊಂಡಿದ್ದರೆ ತಹಶೀಲ್ದಾರ್ ಅವರಿಗೆ ಮೇಲ್ಮನವಿ ಸಲ್ಲಿಸಬಹುದು. ತಕ್ಷಣವೇ ಅವರಿಗೆ ಬಿಪಿಎಲ್ ಕಾರ್ಡ್ ನೀಡುವುದಾಗಿ ಭರವಸೆ ನೀಡಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…