kh muniyappa
ಬೆಂಗಳೂರು: ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ದಾರರಿದ್ದು, ಅವುಗಳನ್ನು ಪರಿಷ್ಕರಣೆ ಮಾಡಲಾಗುವುದು ಜೊತೆಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಮುಂದಿನ ತಿಂಗಳಿನಿಂದ ವೆಬ್ಸೈಟ್ ಮುಕ್ತವಾಗಿಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಚಿಕಿತ್ಸೆಯ ತುರ್ತು ಸಂದರ್ಭಕ್ಕೆ ಅನುಕೂಲವಾಗಲು ಪಡಿತರ ಕಾರ್ಡ್ ನೀಡುವ ಸಲುವಾಗಿ ಪ್ರತ್ಯೇಕ ಪೋರ್ಟಲ್ ಆರಂಭಿಸಲಾಗುತ್ತಿದೆ. ಇನ್ನು ಮುಂದೆ 24 ಗಂಟೆಯೊಳಗಾಗಿ ವೈದ್ಯಕೀಯ ಚಿಕಿತ್ಸೆಗೆ ಪಡಿತರ ಕಾರ್ಡ್ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ 25 ಲಕ್ಷ ಎಪಿಎಲ್ ಕಾರ್ಡ್ದಾರರಿದ್ದು, 1 ಲಕ್ಷ ಮಂದಿ ಅಕ್ಕಿ ತೆಗೆದುಕೊಳ್ಳುತ್ತಿರಲಿಲ್ಲ. ಅದಕ್ಕಾಗಿ ಎಪಿಎಲ್ ಕಾರ್ಡ್ಗೆ ಅಕ್ಕಿ ನೀಡುವುದನ್ನು ನಿಲ್ಲಿಸಲಾಗಿದೆ ಎಂದರು.
ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ. ಬದಲಾಗಿ ಅನರ್ಹರನ್ನು ಎಪಿಎಲ್ ವ್ಯಾಪ್ತಿಗೆ ತರುತ್ತೇವೆ. ಒಂದು ವೇಳೆ ಅರ್ಹರ ಕಾರ್ಡ್ಗಳು ರದ್ದುಗೊಂಡಿದ್ದರೆ ತಹಶೀಲ್ದಾರ್ ಅವರಿಗೆ ಮೇಲ್ಮನವಿ ಸಲ್ಲಿಸಬಹುದು. ತಕ್ಷಣವೇ ಅವರಿಗೆ ಬಿಪಿಎಲ್ ಕಾರ್ಡ್ ನೀಡುವುದಾಗಿ ಭರವಸೆ ನೀಡಿದರು.
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…