ರಾಜ್ಯ

ಅನರ್ಹ ಬಿಪಿಎಲ್ ಕಾರ್ಡ್‍ದಾರರಿಗೆ ಎಪಿಎಲ್ ನೀಡಲು ನಿರ್ಧಾರ: ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‍ದಾರರಿದ್ದು, ಅವುಗಳನ್ನು ಪರಿಷ್ಕರಣೆ ಮಾಡಲಾಗುವುದು ಜೊತೆಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಮುಂದಿನ ತಿಂಗಳಿನಿಂದ ವೆಬ್‍ಸೈಟ್ ಮುಕ್ತವಾಗಿಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಚಿಕಿತ್ಸೆಯ ತುರ್ತು ಸಂದರ್ಭಕ್ಕೆ ಅನುಕೂಲವಾಗಲು ಪಡಿತರ ಕಾರ್ಡ್ ನೀಡುವ ಸಲುವಾಗಿ ಪ್ರತ್ಯೇಕ ಪೋರ್ಟಲ್ ಆರಂಭಿಸಲಾಗುತ್ತಿದೆ. ಇನ್ನು ಮುಂದೆ 24 ಗಂಟೆಯೊಳಗಾಗಿ ವೈದ್ಯಕೀಯ ಚಿಕಿತ್ಸೆಗೆ ಪಡಿತರ ಕಾರ್ಡ್‍ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 25 ಲಕ್ಷ ಎಪಿಎಲ್‌ ಕಾರ್ಡ್‍ದಾರರಿದ್ದು, 1‌ ಲಕ್ಷ ಮಂದಿ ಅಕ್ಕಿ ತೆಗೆದುಕೊಳ್ಳುತ್ತಿರಲಿಲ್ಲ. ಅದಕ್ಕಾಗಿ ಎಪಿಎಲ್ ಕಾರ್ಡ್‍ಗೆ ಅಕ್ಕಿ ನೀಡುವುದನ್ನು ನಿಲ್ಲಿಸಲಾಗಿದೆ ಎಂದರು.

ಬಿಪಿಎಲ್ ಕಾರ್ಡ್‍ಗಳನ್ನು ರದ್ದು ಮಾಡುವುದಿಲ್ಲ. ಬದಲಾಗಿ ಅನರ್ಹರನ್ನು ಎಪಿಎಲ್ ವ್ಯಾಪ್ತಿಗೆ ತರುತ್ತೇವೆ. ಒಂದು ವೇಳೆ ಅರ್ಹರ ಕಾರ್ಡ್‍ಗಳು ರದ್ದುಗೊಂಡಿದ್ದರೆ ತಹಶೀಲ್ದಾರ್ ಅವರಿಗೆ ಮೇಲ್ಮನವಿ ಸಲ್ಲಿಸಬಹುದು. ತಕ್ಷಣವೇ ಅವರಿಗೆ ಬಿಪಿಎಲ್ ಕಾರ್ಡ್ ನೀಡುವುದಾಗಿ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

12 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

1 hour ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

1 hour ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

2 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

3 hours ago