kh muniyappa
ಬೆಂಗಳೂರು: ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ದಾರರಿದ್ದು, ಅವುಗಳನ್ನು ಪರಿಷ್ಕರಣೆ ಮಾಡಲಾಗುವುದು ಜೊತೆಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಮುಂದಿನ ತಿಂಗಳಿನಿಂದ ವೆಬ್ಸೈಟ್ ಮುಕ್ತವಾಗಿಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಚಿಕಿತ್ಸೆಯ ತುರ್ತು ಸಂದರ್ಭಕ್ಕೆ ಅನುಕೂಲವಾಗಲು ಪಡಿತರ ಕಾರ್ಡ್ ನೀಡುವ ಸಲುವಾಗಿ ಪ್ರತ್ಯೇಕ ಪೋರ್ಟಲ್ ಆರಂಭಿಸಲಾಗುತ್ತಿದೆ. ಇನ್ನು ಮುಂದೆ 24 ಗಂಟೆಯೊಳಗಾಗಿ ವೈದ್ಯಕೀಯ ಚಿಕಿತ್ಸೆಗೆ ಪಡಿತರ ಕಾರ್ಡ್ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ 25 ಲಕ್ಷ ಎಪಿಎಲ್ ಕಾರ್ಡ್ದಾರರಿದ್ದು, 1 ಲಕ್ಷ ಮಂದಿ ಅಕ್ಕಿ ತೆಗೆದುಕೊಳ್ಳುತ್ತಿರಲಿಲ್ಲ. ಅದಕ್ಕಾಗಿ ಎಪಿಎಲ್ ಕಾರ್ಡ್ಗೆ ಅಕ್ಕಿ ನೀಡುವುದನ್ನು ನಿಲ್ಲಿಸಲಾಗಿದೆ ಎಂದರು.
ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ. ಬದಲಾಗಿ ಅನರ್ಹರನ್ನು ಎಪಿಎಲ್ ವ್ಯಾಪ್ತಿಗೆ ತರುತ್ತೇವೆ. ಒಂದು ವೇಳೆ ಅರ್ಹರ ಕಾರ್ಡ್ಗಳು ರದ್ದುಗೊಂಡಿದ್ದರೆ ತಹಶೀಲ್ದಾರ್ ಅವರಿಗೆ ಮೇಲ್ಮನವಿ ಸಲ್ಲಿಸಬಹುದು. ತಕ್ಷಣವೇ ಅವರಿಗೆ ಬಿಪಿಎಲ್ ಕಾರ್ಡ್ ನೀಡುವುದಾಗಿ ಭರವಸೆ ನೀಡಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…