ರಾಜ್ಯ

ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ ಒದಗಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು(ಆ.5) ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು.

ಜನರ ಸಹಕಾರ ವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

ಪರಿಹಾರ ಕೆಲಸ ಪ್ರಾರಂಭ

ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ.

ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳ ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ ಎಂದರು.

ಮುಂದಿನ ವಾರ ಹೆಚ್ಚು ಮಳೆ: ಕಟ್ಟೆಚ್ಚರ ವಹಿಸಲು ಸೂಚನೆ
ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು.

ಗೃಹಲಕ್ಷ್ಮಿ
ಗೃಹ ಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂದು ಕೇಳಿದ್ದಕ್ಕೆ ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಬೆಳಗಾವಿ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

19 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

3 hours ago