ರಾಜ್ಯ

ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ ಒದಗಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು(ಆ.5) ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು.

ಜನರ ಸಹಕಾರ ವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

ಪರಿಹಾರ ಕೆಲಸ ಪ್ರಾರಂಭ

ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ.

ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳ ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ ಎಂದರು.

ಮುಂದಿನ ವಾರ ಹೆಚ್ಚು ಮಳೆ: ಕಟ್ಟೆಚ್ಚರ ವಹಿಸಲು ಸೂಚನೆ
ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು.

ಗೃಹಲಕ್ಷ್ಮಿ
ಗೃಹ ಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂದು ಕೇಳಿದ್ದಕ್ಕೆ ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಬೆಳಗಾವಿ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

12 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

13 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

13 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

14 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

14 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

17 hours ago