ಬೆಂಗಳೂರು: ದೆಹಲಿ ಪ್ರವಾಸ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಮ್ಮೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವಪಕ್ಷಗಳ ಸಭೆ ಹೊರತಾಗಿ ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ನಾನು ಸಿಎಂ ಸಿದ್ದರಾಮಯ್ಯನವರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಿ ಚರ್ಚೆ ನಡೆಸುತ್ತೇನೆ. ಬಳಿಕ ನಿರ್ಧರಿಸುವುದಾಗಿ ತಿಳಿಸಿದರು.
ಇದನ್ನು ಓದಿ: ದಿತ್ವಾ ಚಂಡಮಾರುತ ಎಫೆಕ್ಟ್: ಮೂರು ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ನಾನು ಯಾರ ಬೆನ್ನಿಗೂ ಚೂರಿ ಹಾಕುವವನೂ ಅಲ್ಲ. ನಾನು ಯಾವುದೇ ಶಾಸಕರನ್ನು ಕರೆದುಕೊಂಡು ದೆಹಲಿಗೆ ಹೋಗಿಲ್ಲ. ಹೋಗವೇಕು ಎಂದರೆ ನೂರು ಶಾಸಕರನ್ನು ಒಟ್ಟಿಗೆ ಕರೆದುಕೊಂಡು ಹೋಗಬಹುದಿತ್ತು. ಅದೇನೂ ನನಗೆ ದೊಡ್ಡದಲ್ಲ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. 2028ರಲ್ಲಿಯೂ ಕಾಂಗ್ರೆಸ್ ಸರ್ಕಾರ ತರುವುದೇ ನಮ್ಮ ಗುರಿ ಎಂದು ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…