ರಾಜ್ಯ

ರಾಜ್ಯ ಸರ್ಕಾರದ ಅವನತಿ ಶುರುವಾಗಿದೆ : ಕೆಎಸ್​ ಈಶ್ವರಪ್ಪ

ಬೆಂಗಳೂರು : ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆಂದು ಸಿದ್ದರಾಮಯ್ಯ ಹೇಳಿಕೆ ನೀಡಿದ ದಿನದಿಂದಲೇ ಕಾಂಗ್ರೆಸ್ ಸರ್ಕಾರದ ಅವನತಿ ಅಧಿಕೃತವಾಗಿ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಅಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲ್ಲ ಎಂಬವುದು ಡಿಕೆ ಶಿವಕುಮಾರ್​ ಅವರ ಮಾತಿನ ಅರ್ಥ. ನಾನೇ ಸಿಎಂ ಎನ್ನುವ ದೌರ್ಭಾಗ್ಯ ಸಿದ್ದರಾಮಯ್ಯಗೆ ಬರಬಾರದಿತ್ತು. ಕರ್ನಾಟಕದ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೆ ಅಂತಾ ಹೇಳಿದ್ದೆ. ಅಜಿತ್ ಪವಾರ್​​ಗಳು ಬಹಳ ಜನ ಹುಟ್ಟಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಹಿರಂಗ ಹೇಳಿಕೆ ಕೊಡದಂತೆ ಕಾಂಗ್ರೆಸ್​​ ನಾಯಕರು ಸೂಚಿಸಿದ್ದರು. ಅವರು ಬಂದು ಹಫ್ತಾ ವಸೂಲಿ ಮಾಡಿಕೊಂಡು ಹೋದರು. ಮರುದಿನವೇ ಅಸಮಾಧಾನ ಸ್ಫೋಟವಾಗಿದೆ. ಜೆಸಿಬಿಯಿಂದ ಲೂಟಿ ಮಾಡಿದ ರೀತಿ ಹಣದ ಲೂಟಿ ನಡೆಯುತ್ತಿದೆ. ಕೈ ಸರ್ಕಾರ ಬಂದ ಮೇಲೆ ರಸ್ತೆಗೆ ಒಂದು ಬುಟ್ಟಿ ಮಣ್ಣೂ ಹಾಕಿಲ್ಲ. ಇದು ಆರ್ಥಿಕವಾಗಿ ಪಾಪರ್ ಆಗಿರುವ ಸರ್ಕಾರ. ಸಿಎಂ ಗೌರವಯುತವಾಗಿ ರಾಜೀನಾಮೆ ಕೊಡುವುದು ಒಳ್ಳೆಯದು. ಇಲ್ಲದಿದ್ದರೆ ಮಂತ್ರಿಗಳು, ಶಾಸಕರೇ ಸರ್ಕಾರ ಬೀಳಿಸುತ್ತಾರೆ. ಸಿಎಂ, ಡಿಸಿಎಂ ಸಂಪುಟ ವಿಸರ್ಜಿಸಿ ಚುನಾವಣೆಗೆ ಹೋಗೋದು ಸೂಕ್ತ ಎಂದರು.

ಪ್ರಧಾನಿ ಮೋದಿ ಅವರ ಬಗ್ಗೆ ಏಕವಚನದಲ್ಲಿ ಸಿದ್ದರಾಮಯ್ಯ ಪದ ಪ್ರಯೋಗಿಸುವ ಕುರಿತು ಮಾತನಾಡಿದ ಅವರು ಅವರಿಗಿಂತ ಜಾಸ್ತಿ ಪದ ಪ್ರಯೋಗ ಮಾಡಲು ಬರುತ್ತದೆ. ನಾನು ಆರ್​ಎಸ್​ಎಸ್​ನಲ್ಲಿ ಬೆಳೆದವನು. ಬಿಜೆಪಿ ಜವಾಬ್ದಾರಿ ಇರುವವನು. ಸಂಸ್ಕಾರ ಹೇಳಿಕೊಟ್ಟಿದ್ದಾರೆ. ಇನ್ನೊಂದು ಬಾರಿ ಮೋದಿ ಅವರ ಬಗ್ಗೆ ಸಿದ್ದರಾಮಯ್ಯ ಏಕವಚನದಲ್ಲಿ ಮಾತಾಡಿದರೆ ಆಗ ನಾನು ಏನು ಹೇಳಬೇಕೋ ಅದನ್ನೇ ಹೇಳುತ್ತೇನೆ ಎಂದು ತಿರುಗೇಟು ನೀಡಿದರು.

ಜಾತಿ ಗಣತಿ ಬಿಡುಗಡೆ ಮಾಡುತ್ತಾರೋ ಇಲ್ಲವೋ ಎಂಬುವುದನ್ನು ಬಹಿರಂಗವಾಗಿ ಸರ್ಕಾರ ಹೇಳಬೇಕು. ಕಾಂತರಾಜ್ ವರದಿ ಅವೈಜ್ಞಾನಿಕ ಅಂತ ನಿರ್ಮಲಾನಂದ ಸ್ವಾಮೀಜಿ ಹೇಳಿದ್ದಾರೆ. ನ್ಯಾಯಾಲಯದ ಮೊರೆ ಹೋದರೇ ಒಂದೇ ದಿನದಲ್ಲಿ ವರದಿ ಬಿದ್ದು ಹೋಗುತ್ತದೆ. ಇವರಿಗೆ ಜನರಿಗೆ ಅನುಕೂಲ ಮಾಡಬೇಕು ಅಂತ ಇಲ್ಲ. ಆ ವರದಿ ಇಟ್ಟುಕೊಂಡು ಮತ್ತೆ ವೋಟ್ ಪಡೆಯಬೇಕು ಅಷ್ಟೇ ಎಂದು ವಾಗ್ದಾಳಿ ಮಾಡಿದರು.

ಇದನ್ನು ಮೊದಲು ಮಾಡಿದ್ದು ನಮ್ಮ ಸರ್ಕಾರದಲ್ಲಿ, ಬಿಎಸ್​ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಹಣ ಬಿಡುಗಡೆ ಮಾಡಿದ್ದರು. ಇವರು ಹಿಂದುಳಿದ ವರ್ಗಗಳ ಚಾಂಪಿಯನ್ ಅಂತಾ ಅನ್ನಿಸಿಕೊಳ್ಳಲು ಕಾಂತರಾಜ್ ವರದಿ ಬಗ್ಗೆ ಹೇಳುತ್ತಿದ್ದಾರೆ. ಇಷ್ಟು ಮೋಸ ಮಾಡಿ ಹಿಂದುಳಿದ ವರ್ಗಗಳ ನಾಯಕ ಅಂತಾ ಅನ್ನಿಸಿಕೊಳ್ಳಬೇಕಾ? ಚಡ್ಡಿ ಒಂದು ವಿಷಯ ಬಿಟ್ಟು ಉಳಿದದ್ದು ಎಲ್ಲಾ ಬಿ.ಕೆ. ಹರಿ ಪ್ರಸಾದ್ ಹೇಳಿದ್ದು ಸರಿ ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

ದೆಹಲಿಯಲ್ಲಿ ಗುರುವಾರ ನಡೆದ ಓಬಿಸಿ ಸಭೆ ವಿಚಾರವಾಗಿ ಮಾತನಾಡಿದ ಅವರು ದೆಹಲಿಯಲ್ಲಿ ಹಿಂದುಳಿದ ವರ್ಗಗಳ ವಿಚಾರವಾಗಿ ಸಭೆ ನಡೆಯಿತು. 40 ಜನ ಸಭೆಯಲ್ಲಿ ಭಾಗವಹಿಸಿದ್ದರು. ಹಿಂದುಳಿದ ವರ್ಗಗಳ ಬಗ್ಗೆ ಸ್ಪಷ್ಟವಾಗಿ ತಜ್ಞರ ಜೊತೆ ಎಲ್ಲಾ ಚರ್ಚೆ ಮಾಡಿ ಒಂದು ರೂಪ ತರಬೇಕು ಎಂದು ಚರ್ಚೆಯಾಯಿತು. ಇದನ್ನು ಹೊರತುಪಡಿಸಿ ರಾಜ್ಯದ ವಿಚಾರ ಯಾವುದೂ ಚರ್ಚೆ ಆಗಲಿಲ್ಲ ಎಂದು ಸ್ಪಷ್ಟಪಡಿಸಿದರು.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago